8:08 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ್ಲಿ ಬೊಂದೆಲ್ ತಂಡ ಪ್ರಥಮ

11/12/2023, 19:01

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.


ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜ ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು