8:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? 

05/08/2021, 09:13

ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ದಾಳಿ ನಡೆಸಿದ ಎನ್ ಐಎ ತಂಡ ದಿನವಿಡೀ ವಿಚಾರಣೆ ನಡೆಸಿ ಬಳಿಕ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ. ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿದೆ.

ಆತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಬೆಂಗಳೂರು ಅಥವಾ ದಿಲ್ಲಿಗೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. 

ಎನ್ಐಎ ತಂಡ ತಲಾ ಒಬ್ಬರನ್ನು ಮಂಗಳೂರು(ಉಳ್ಳಾಲ) ಮತ್ತು ಬೆಂಗಳೂರಿನಿಂದ ಮತ್ತು ಇತರ ಇಬ್ಬರನ್ನು ಜಮ್ಮು-ಕಾಶ್ಮೀರದ ಬಂಡಿಪೋರ ಮತ್ತು ಶ್ರೀನಗರದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು