2:10 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? 

05/08/2021, 09:13

ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ದಾಳಿ ನಡೆಸಿದ ಎನ್ ಐಎ ತಂಡ ದಿನವಿಡೀ ವಿಚಾರಣೆ ನಡೆಸಿ ಬಳಿಕ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ. ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿದೆ.

ಆತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಬೆಂಗಳೂರು ಅಥವಾ ದಿಲ್ಲಿಗೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. 

ಎನ್ಐಎ ತಂಡ ತಲಾ ಒಬ್ಬರನ್ನು ಮಂಗಳೂರು(ಉಳ್ಳಾಲ) ಮತ್ತು ಬೆಂಗಳೂರಿನಿಂದ ಮತ್ತು ಇತರ ಇಬ್ಬರನ್ನು ಜಮ್ಮು-ಕಾಶ್ಮೀರದ ಬಂಡಿಪೋರ ಮತ್ತು ಶ್ರೀನಗರದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು