6:53 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? 

05/08/2021, 09:13

ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ದಾಳಿ ನಡೆಸಿದ ಎನ್ ಐಎ ತಂಡ ದಿನವಿಡೀ ವಿಚಾರಣೆ ನಡೆಸಿ ಬಳಿಕ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ. ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿದೆ.

ಆತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಬೆಂಗಳೂರು ಅಥವಾ ದಿಲ್ಲಿಗೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. 

ಎನ್ಐಎ ತಂಡ ತಲಾ ಒಬ್ಬರನ್ನು ಮಂಗಳೂರು(ಉಳ್ಳಾಲ) ಮತ್ತು ಬೆಂಗಳೂರಿನಿಂದ ಮತ್ತು ಇತರ ಇಬ್ಬರನ್ನು ಜಮ್ಮು-ಕಾಶ್ಮೀರದ ಬಂಡಿಪೋರ ಮತ್ತು ಶ್ರೀನಗರದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು