3:50 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸದ ದೀಪೋತ್ಸವ: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವ

12/12/2023, 14:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.


ನಂಜನಗೂಡು ತಾಲೂಕಿನ ಸ್ಥಳೀಯ ನಯನಜಕ್ಷತ್ರಿಯ ಜನಾಂಗ ಹಾಗೂ ಮುಡಿ ಕಟ್ಟೆ ಸಂಘದ ವತಿಯಿಂದ ಅನಾದಿ ಕಾಲದಿಂದಲೂ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವ
ನಡೆಸಿಕೊಂಡು ಬರುತ್ತಿದೆ.
ಚಿನ್ನಾಭರಣ ಹಾಗೂ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಲಾದ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ವಿದ್ಯುತ್ ದೀಪ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಕೂರಿಸಲಾಯಿತು.
ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿನ ಹೆಸರಾಂತ ವಾದ್ಯಗೋಷ್ಠಿ ಮುಖಾಂತರ ಪಟ್ಟಣದ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು.
ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಉತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಉತ್ಸವದ ಉದ್ದಕ್ಕೂ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಬಾಣ ಬಿರುಸುಗಳನ್ನು ಸಿಡಿಸಿ ನೆರೆದಿದ್ದ ಭಕ್ತರ ಮನಸೂರೆಗೊಂಡರು.
ಇದೇ ಸಂದರ್ಭ ದೇವಾಲಯದ ಹೊರಗೆ ನೂರಾರು ಭಕ್ತರು ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು. ಜನಾಂಗದ ಮುಖಂಡ ಶ್ರೀನಿವಾಸ್ ಮಾತನಾಡಿ ನಮ್ಮ ಜನಾಂಗ ಹಾಗೂ ಮುಡಿಕಟ್ಟೆ ವತಿಯಿಂದ ಕಾರ್ತಿಕ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷದಂತೆ ಹೆಸರಾಂತ ವಾದ್ಯಗೋಷ್ಠಿಯವರನ್ನು ಕರೆಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಾ ಬಂದಿದ್ದೇವೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು