6:05 AM Monday21 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸದ ದೀಪೋತ್ಸವ: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವ

12/12/2023, 14:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹೂವಿನ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.


ನಂಜನಗೂಡು ತಾಲೂಕಿನ ಸ್ಥಳೀಯ ನಯನಜಕ್ಷತ್ರಿಯ ಜನಾಂಗ ಹಾಗೂ ಮುಡಿ ಕಟ್ಟೆ ಸಂಘದ ವತಿಯಿಂದ ಅನಾದಿ ಕಾಲದಿಂದಲೂ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವ
ನಡೆಸಿಕೊಂಡು ಬರುತ್ತಿದೆ.
ಚಿನ್ನಾಭರಣ ಹಾಗೂ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಲಾದ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ವಿದ್ಯುತ್ ದೀಪ ಹಾಗೂ ಹೂಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಕೂರಿಸಲಾಯಿತು.
ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿನ ಹೆಸರಾಂತ ವಾದ್ಯಗೋಷ್ಠಿ ಮುಖಾಂತರ ಪಟ್ಟಣದ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು.
ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಉತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಉತ್ಸವದ ಉದ್ದಕ್ಕೂ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಬಾಣ ಬಿರುಸುಗಳನ್ನು ಸಿಡಿಸಿ ನೆರೆದಿದ್ದ ಭಕ್ತರ ಮನಸೂರೆಗೊಂಡರು.
ಇದೇ ಸಂದರ್ಭ ದೇವಾಲಯದ ಹೊರಗೆ ನೂರಾರು ಭಕ್ತರು ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು. ಜನಾಂಗದ ಮುಖಂಡ ಶ್ರೀನಿವಾಸ್ ಮಾತನಾಡಿ ನಮ್ಮ ಜನಾಂಗ ಹಾಗೂ ಮುಡಿಕಟ್ಟೆ ವತಿಯಿಂದ ಕಾರ್ತಿಕ ಮಾಸದ ಕಡೆ ಸೋಮವಾರದಂದು ಪ್ರತಿ ವರ್ಷದಂತೆ ಹೆಸರಾಂತ ವಾದ್ಯಗೋಷ್ಠಿಯವರನ್ನು ಕರೆಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪಲ್ಲಕ್ಕಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಾ ಬಂದಿದ್ದೇವೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು