6:54 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು