1:57 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು