1:06 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಹುಲ್ಲಹಳ್ಳಿಯಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ: ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ಅವರಿಂದ ಜಾಗೃತಿ

12/12/2023, 18:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಬೇಕು. ನಾಲ್ಕು ಚಕ್ರ ಹಾಗೂ ದೊಡ್ಡ ವಾಹನದ ಚಾಲಕರು ಸರ್ಕಾರ ಜಾರಿ ಮಾಡಿರುವ ಸಂಚಾರಿ ನಿಯಮವನ್ನು ಪಾಲನೆ ಮಾಡಬೇಕು. ನಮ್ಮ ಜೀವವನ್ನು ರಕ್ಷಿಸಿಕೊಳ್ಳಬೇಕು, ಮತ್ತೊಬ್ಬರ ಜೀವವನ್ನು ಸುರಕ್ಷತೆಗೊಳಿಸಬೇಕು ಎಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ನೀತಿ ಪಾಠ ಹೇಳಿ ಸಂಚಾರಿ ನಿಯಮವನ್ನು ಪಾಲನೆ ಮಾಡಲು ಜಾಗೃತಿ ಮೂಡಿಸಿದರು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ವೃತ್ತ ನಿರೀಕ್ಷಕ ಬಸವರಾಜು ರವರ ಮಾರ್ಗದರ್ಶನದಲ್ಲಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ಅವರ ನೇತೃತ್ವದಲ್ಲಿ ಅಪರಾಧ ತಡೆ ಮಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ನಾವು ಕಾನೂನು ಪಾಲನೆ ಮಾಡುವ ಸಲುವಾಗಿ ತಮಗೆ ಇಲಾಖೆ ತೋರುವ ಎಲ್ಲಾ ನೀತಿ ನಿಯಮ ಸಲಹೆಗಳನ್ನು ನೀಡುತ್ತಿದ್ದೇವೆ ಯಾರೇ ಆಗಲಿ ಕಾನೂನು ಪಾಲನೆ ಮಾಡಿ. ಕಾನೂನಿನ ಅರಿವನ್ನು ನೀವು ಅಳವಡಿಸಿಕೊಳ್ಳಬೇಕು ಮತ್ತೊಬ್ಬರಿಗೂ ತಿಳಿ ಹೆಳಬೇಕು ಎಂಬ ಸದ್ದು ದೇಶದಿಂದ ನಿರಂತರವಾಗಿ ಹುಲ್ಲಹಳ್ಳಿ ಹೋಬಳಿ ಕೇಂದ್ರದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಸಂದರ್ಭದಲ್ಲಿ ಆಟೋ ಚಾಲಕರು ಮತ್ತು ವಾಹನ ಚಾಲಕರ ಜೊತೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂದರ್ಭದಲ್ಲಿ ಎಎಸ್ಐ ಶಿವಣ್ಣ ದಫೆದರ್ ದೊಡ್ಡಯ್ಯ ಸರಿದಂತೆ ಸಾಕಷ್ಟು ಸಿಬ್ಬಂದಿಗಳು ಆಟೋ ಚಾಲಕರು ಮತ್ತು ವಾಹನ ಚಾಲಕರು ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು