8:28 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಗೆ ಪಿಜ್ಜಾ ಹಟ್​​ ಮೆನೇಜರ್ ನಿಂದ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್

05/08/2021, 10:18

ಬೆಂಗಳೂರು(reporterkarnataka news): ಪ್ರೀತಿ ನಿವೇದನೆಯನ್ನು ನಿರಾಕರಿಸಿದಳು ಎಂದು ಸಿಟ್ಟುಗೊಂಡ ಮೇನೇಜರ್ ವೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಿಜ್ಜಾ ಹಟ್​​ ಮೆನೇಜರ್ ಹಲವು ದಿನಗಳಿಂದ​ ಸಂತ್ರಸ್ತೆಯನ್ನು ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ.ಯುವತಿ ಇದನ್ನು ಪ್ರತಿಬಾರಿಯೂ 

ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಮೆನೇಜರ್ ಆಕೆಯ ಮೊಬೈಲ್​ ಚೆಕ್​ ಮಾಡಿ ಕಪಾಳಕ್ಕೆ ಬಾರಿಸಿದ್ದಾನೆ. ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾಳೆ.

ಸ್ಥಳದಲ್ಲಿದ್ದ ಮತ್ತೊಬ್ಬ ಸಿಬ್ಬಂದಿ ಆಕೆಯ ಸಹಾಯಕ್ಕೆ ಮುಂದಾಗಿದ್ದಾನೆ.
ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದರೂ ನೌಕರಿ ಕಳೆದುಕೊಳ್ಳುವ ಭಯದಿಂದ ಯುವತಿ ಪೊಲೀಸರಿಗೆ ದೂರು ನೀಡಿಲ್ಲ. ಆದರೆ ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿ ಸುದ್ದಿಯಾಗುತ್ತಿದೆ. ಪೊಲೀಸರು ಸುಮೊಟೊ ಪ್ರಕರಣ ದಾಖಲಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು