5:51 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಡಿಸೆಂಬರ್ 15- 17ರಂದು 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ

14/12/2023, 22:58

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ಡಿ.15 ಮತ್ತು 16 ಮತ್ತು 17ರಂದು ಜರುಗಲಿದೆ.
ಡಿ.15ರಂದು ಬೆಳಗ್ಗೆ 10 ಗಂಟೆಗೆ ಮಾಹೆಯ ವೈಸ್ ಚಾನ್ಸಲರ್ ಲೆ.ಜ. ಡಾ. ವೆಂಕಟೇಶ್ ಉದ್ಘಾಟಿಸುವರು. ಮಾಹೆಯ ಪ್ರೊ.ಚಾನ್ಸಲರ್ ಡಾ.ಶರತ್ ರಾವ್ ಮುಖ್ಯ ಅತಿಥಿಯಾಗಿರುವರು. ಡಿ.16ರಂದು ನಡೆಯುವ ಬೆಳಗ್ಗೆ 9.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ಐಡಿಎ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜೀವ್ ಕುಮಾರ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ, ರಾಜ್ಯ ಅಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ, ಜಿಲ್ಲಾ ಐಡಿಎ ಅಧ್ಯಕ್ಷ ಡಾ.ಜುನೈದ್ ಅಹ್ಮದ್ ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿರುವರು. ಒಟ್ಟು 26 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಮುಖ ಭಾಷಣ, 231 ಪ್ರಬಂಧ ಮಂಡನೆ, 279 ಚಿತ್ರ ಪ್ರಬಂಧ ಮಂಡನೆ, 13 ಪ್ರಾತ್ಯಕ್ಷಿತೆ ಶಿಬಿರ ನಡೆಯಲಿದೆ. ದೇಶದ ವಿವಿಧೆಡೆಯಿಂದ ಅಂದಾಜು 2 ಸಾವಿರ ದಂತ ವೈದ್ಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು