2:36 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ

17/12/2023, 11:52

ಮಂಗಳೂರು(reporterkarnataka.com): ಗುರುಪುರ ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವದ ಲಾಂಛನ ಬಿಡುಗಡೆ ಸಮಾರಂಭ ನಗರದ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷ ಇನಾಯತ್ ಆಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು,
ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು ಶುಭ ಹಾರೈಸಿದರು.
ಸುರೇಂದ್ರ ಕಂಬಳಿ ಮಾತನಾಡಿ, ತುಳುನಾಡಿನ ಸಾಂಪ್ರದಾಯಿಕ ಆಚರಣೆಯ ಸಂಕೇತವಾಗಿ ಬಂದ ಕಂಬಳದ ಮೂಲಕ ಇನ್ನಷ್ಟು ವಿಸ್ತರಣೆಯಾಗಲಿ ಎಂದರು.
ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ ತಿರುವೈಲ್ ಗುತ್ತು ಅವರು ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ,ಅಂತಾರಾಷ್ಟ್ರೀಯ ಕಾರ್ ರೇಸ್ ಪಟು ಅಶ್ವಿನಿ ನಾಯ್ಕ್ , ಉಮೇಶ್ ರೈ ಪದವು ಮೇಗಿನ ಮನೆ, ಮಾಜಿ ಜಿ.ಪಂ ಸದಸ್ಯ ಯು.ಪಿ.ಇಬ್ರಾಹಿಂ, ಗಡಿಕಾರ ಪ್ರಮೋದ್ ರೈ, ಕರಾವಳಿ ಜೋಡುಕರೆ ಕಂಬಳ ಗುರುಪುರ ಸದಸ್ಯರಾದ ಹರೀಶ್ ಭಂಡಾರಿ, ವಿನಯ ಕುಮಾರ್ ಶೆಟ್ಟಿ, ಯಶವಂತ ಶೆಟ್ಟಿ, ಪುರುಷೋತ್ತಮ, ಜಗದೀಶ್ ಆಳ್ವ, ಗಿರೀಶ್ ಆಳ್ವ, ಸುನಿಲ್ ಗಂಜಿಮಠ, ಸುಧಾಕರ, ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು
ವಿಜೇತ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು