4:01 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು