4:19 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬ್ರ್ಯಾಂಡ್ ಮಂಗಳೂರು ವಾಕಥಾನ್; ಜನತೆಯ ಸಹಭಾಗಿತ್ವದಲ್ಲಿ ಸಮೃದ್ಧ ಮಂಗಳೂರು: ಮೇಯರ್ ಸುಧೀರ್ ಶೆಟ್ಟಿ ಆಶಯ

17/12/2023, 18:16

ಮಂಗಳೂರು(reporterkarnataka.com): ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾದ ಬ್ರ್ಯಾಂಡ್ ಮಂಗಳೂರು ವಾಕಥಾನ್ ಗೆ ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸಮೃದ್ಧ ಮಂಗಳೂರು ಸಾಕಾರಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಂಗಳೂರು ವಿಶ್ವ ವಿದ್ಯಾನಿಲಯ ದ ಎನ್ ಎಸ್‌ ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಇಂಜಿನಿಯರ್ ಚಂದ್ರಶೇಖರಯ್ಯ ಕೆ.ಟಿ., ಮಂಗಳೂರು ಸ್ಮಾರ್ಟ್ ಸಿಟಿ ಮಹಾಪ್ರಬಂಧಕ ಅರುಣ್ ಪ್ರಭಾ,ಗ್ರಾಮೀಣ ವಿಕಾಸ ಯೋಜನೆಯ ನೋಡಲ್ ಅಧಿಕಾರಿ ತುಕಾರಾಮ ಗೌಡ,ಎನ್ ಎಸ್ ಎಸ್ ಸೈಂಟ್ ಆಗ್ನೆಸ್ ಕಾಲೇಜಿನ ಯೋಜನಾಧಿಕಾರಿ ಉದಯ ಕುಮಾರ್, ಕೆನರಾ ಕಾಲೇಜಿನ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಕೀರ್ತನಾ ಭಟ್, ಬೆಸೆಂಟ್ ಕಾಲೇಜಿನ ಯೋಜನಾಧಿಕಾರಿ ರವಿ ಪ್ರಭ,ಜಿಲ್ಲಾ ಪತ್ರ ಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಸದಸ್ಯ ರೇಮಂಡ್ ತಾಕೊಡೆ, ರೆಡ್ ಕ್ರಾಸ್ ನಿರ್ದೇಶಕ
ರವೀಂದ್ರನಾಥ ಉಚ್ಚಿಲ್, ವಿಭಾ ನಾಯಕ್ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.



ದ.ಕ.ಜಿಲ್ಲಾಡಳಿತ, ಮಂಗಳೂರು ಮಹಾ ನಗರ ಪಾಲಿಕೆ, ಮಂಗಳೂರು ಸ್ಮಾರ್ಟ್ ಸಿಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಆಯುಕ್ತರ ಕಾರ್ಯಾಲಯ, ಮಂಗಳೂರು ವಿ.ವಿ.ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ವಾಕಥಾನ್ ನಡೆಯಿತು. ನಗರದ ಮೈದಾನ್ ರಸ್ತೆ- ಸ್ಟೇಟ್ ಬ್ಯಾಂಕ್- ಹಂಪನಕಟ್ಟೆ ರಸ್ತೆ ಮೂಲಕ ಸಾಗಿ ಬಂದ ವಾಕಥಾನ್ ನಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು