8:32 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಮಂಗಳೂರು: ಕೆಪಿಎಸ್ ಸಿ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಬೇಜವಾಬ್ದಾರಿತನ; ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ನೇಮಕ

17/12/2023, 20:05

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇದು ನಡೆದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ನೇಮಿಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಡಲಾದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ಬಳಸಲಾಗಿತ್ತು. ವಿದ್ಯಾರ್ಥಿಗಳ ಕೈಗೆ ಮೆಟಲ್ ಡಿಟೆಕ್ಟರ್ ಕೊಟ್ಟು ಅಭ್ಯರ್ಥಿಗಳ ತಪಾಸಣೆ ಮಾಡಿಸಲಾಗಿತ್ತು. ಇದೀಗ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ಬಳಸಿಕೊಂಡ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಪರೀಕ್ಷೆ ಮಂಗಳೂರಿನ ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಇಂದು ನಡೆಯಿತು. ಈ ಸಂದರ್ಭ ಅಧಿಕಾರಿಗಳ ಬೇಜವಾಬ್ದಾರಿ ಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ವೀಡಿಯೊ ವೈರಲ್ ಆಗುತ್ತಿದೆ. ಇದರಲ್ಲಿ ವಿದ್ಯಾರ್ಥಿ ಗಳು ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸರಿಯಾಗಿ ತಪಾಸಣೆ ನಡೆಸದೇ ಪರೀಕ್ಷಾ ಕೇಂದ್ರ ಪ್ರವೇಶಿಸುತ್ತಿರುವ ಅಭ್ಯರ್ಥಿಗಳ ವಿಡಿಯೋ ಹರಿದಾಡುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು