4:14 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಮಂಗಳೂರು: ಕೆಪಿಎಸ್ ಸಿ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಬೇಜವಾಬ್ದಾರಿತನ; ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ನೇಮಕ

17/12/2023, 20:05

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇದು ನಡೆದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ನೇಮಿಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಡಲಾದ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ಬಳಸಲಾಗಿತ್ತು. ವಿದ್ಯಾರ್ಥಿಗಳ ಕೈಗೆ ಮೆಟಲ್ ಡಿಟೆಕ್ಟರ್ ಕೊಟ್ಟು ಅಭ್ಯರ್ಥಿಗಳ ತಪಾಸಣೆ ಮಾಡಿಸಲಾಗಿತ್ತು. ಇದೀಗ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ಬಳಸಿಕೊಂಡ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಪರೀಕ್ಷೆ ಮಂಗಳೂರಿನ ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಇಂದು ನಡೆಯಿತು. ಈ ಸಂದರ್ಭ ಅಧಿಕಾರಿಗಳ ಬೇಜವಾಬ್ದಾರಿ ಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ವೀಡಿಯೊ ವೈರಲ್ ಆಗುತ್ತಿದೆ. ಇದರಲ್ಲಿ ವಿದ್ಯಾರ್ಥಿ ಗಳು ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸರಿಯಾಗಿ ತಪಾಸಣೆ ನಡೆಸದೇ ಪರೀಕ್ಷಾ ಕೇಂದ್ರ ಪ್ರವೇಶಿಸುತ್ತಿರುವ ಅಭ್ಯರ್ಥಿಗಳ ವಿಡಿಯೋ ಹರಿದಾಡುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು