12:34 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸಿಎಂ, ಡಿಸಿಎಂ ಸರ್ವಾಧಿಕಾರಿಗಳಾ?: ನಿಂದನೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಡಾ.ಭರತ್ ಶೆಟ್ಟಿ ಕಿಡಿ

17/12/2023, 20:11

ಸುರತ್ಕಲ್(reporterkarnataka.com): ರಾಜಕಾರಣಿಗಳ ವಿರುದ್ದ ಜನರ ಟೀಕೆ ಸಾಮಾನ್ಯ.ಅದನ್ನು ಅರಗಿಸಿಕೊಂಡು ರಾಜಕಾರಣ ಮಾಡುವ ಉದಾರ ಮನಸ್ಸು ಬೆಳೆಸಿಕೊಳ್ಳಿ.
ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ , ನೀವೇನು ಸರ್ವಾಧಿಕಾರಿಗಳಾ?. ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿ ಕಾರ್ಯಕರ್ತರಲ್ಲಿ ಭೀತಿ ಮೂಡಿಸುವ ನಿಮ್ಮ ಕುತಂತ್ರವನ್ನು ಮೆಟ್ಟಿ ನಿಲ್ಲುತ್ತೇವೆ ಎಂದು ಡಾ.ಭರತ್ ಶೆಟ್ಟಿ ವೈ. ಗುಡುಗಿದ್ದಾರೆ.
ಮೋದಿ, ಯೋಗಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ದಿನ ಬೆಳಗಾದರೆ ನಿಂದನೆಯ ಮಹಾಪೂರ ಹರಿದು ಬರುತ್ತದೆ. ಇದರ ವಿರುದ್ದ ಬಿಜೆಪಿ ಕಾರ್ಯಕರ್ತರು ಕೇಸು ದಾಖಲಿಸುತ್ತಾ ಹೋದರೆ ಠಾಣೆಯಲ್ಲಿ ಇರುವ ಸೆಲ್ ಗಳು ಸಾಕಾಗದು.
ಸಾಮಾನ್ಯರು ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ವಾರಗಟ್ಟಲೆ ಸತಾಯಿಸುವ ಪೊಲೀಸ್ ಇಲಾಖೆ, ಕಾಂಗ್ರೆಸ್ ಪರವಾಗಿ ಕೆಲಸ ಮಾಡಲು ತುದಿಗಾಲಲ್ಲಿ ನಿಂತಿರುವಂತೆ ಕಾಣುತ್ತದೆ.
ಹೆಚ್ಚು ದಿನ ಇಂತಹ ಕಳ್ಳ ಪೊಲೀಸ್ ಆಟ ನಡೆಯಲಾರದು ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನ ಪರ ಪಕ್ಷ ಹಾಗೂ ವೈಯಕ್ತಿಕವಾಗಿ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು