6:31 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿ ಮೇಲೆರಗಿದ ಕಾಮುಕ: ಬೊಬ್ಬೆ ಕೇಳಿ ಓಡಿ ಬಂದ ಪತಿ ಜತೆ ಪತ್ನಿಗೂ ಕುಡುಗೋಲಿನಿಂದ ಹಲ್ಲೆ

18/12/2023, 12:19

ಮೋಹನ್ ನಂಜನಗೂಡು ಮೈಸೂರು

info.reporterkarnataka@ gmail.com

ನಂಜನಗೂಡು ತಾಲೂಕಿನ ಹೊಸ ಕಡಜೇಟಿ ಗ್ರಾಮದ ಮಹದೇವಸ್ವಾಮಿ ಆತನ ಪತ್ನಿ ಸುಜಾತ ಎಂಬುವರು ಕಂದೇಗಾಲ ಸಮೀಪವಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.


ಕೆಲಸ ಮಾಡುವ ತೋಟದ ಒಳಭಾಗದಲ್ಲಿ ವಿದ್ಯುತ್ ಫೀಸ್ ಹಾಕಲು ತೆರಳಿದ ವಿವಾಹಿತ ಮಹಿಳೆಯ ಪತಿ ಮಹದೇವಸ್ವಾಮಿ ಇಲ್ಲದೆ ಇರುವ ಸಮಯವನ್ನೇ ನೋಡಿ ತೋಟದ ಮನೆಯ ಬಳಿ ಒಬ್ಬಂಟಿ ಮಹಿಳೆ ಇರುವುದನೆ ಗಮನಿಸಿದ ಕಾಮುಕ ನವೀನ ಎಂಬಾತ ಏಕಾಏಕಿ ತಂತಿ ಬೇಲಿಯನ್ನು ಜಿಗಿದು ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಸುಜಾತ ಎಂಬುವರ ಮೇಲೇರಗಿ ಚಿರಟ ಮಾಡದಂತೆ ಬಾಯಿಗೆ ಬಟ್ಟೆಯನ್ನು ತುರುಕಿ ಬಲತ್ಕಾರಕ್ಕೆ ಮುಂದಾಗಿದ್ದಾನೆ. ಕಿರಾತಕ ನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಚೀರಾಟ ಮಾಡುತ್ತಿರುವುದನ್ನು ಕೇಳಿ ಸಮೀಪದಲ್ಲಿ ಇದ್ದ ಸುಜಾತಳ ಗಂಡ ಮಹದೇವಸ್ವಾಮಿ ಸ್ಥಳಕ್ಕೆ ಆಗಮಿಸಿದಾಗ ಆತನ ಮೇಲೆಯೂ ಕುಡುಗೋಲಿನಿಂದ ಹಲ್ಲೆ ಮಾಡಿ ಸ್ಥಳದಿಂದ ಕಾಮುಕ ನವೀನ ಪರಾರಿಯಾಗಿದ್ದಾನೆ.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸುಜಾತ ಮತ್ತು ಆತನ ಪತಿ ಮಹದೇವಸ್ವಾಮಿ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಜಾತಳ ಮೈ ಭಾಗದ ವಿವಿಧ ಭಾಗಗಳಲ್ಲಿ ಕಚ್ಚಿರುವ ಗುರುತು ಮತ್ತು ಕುಡುಗೋಲಿನಿಂದ ಹಲ್ಲೆ ಮಾಡಿರುವ ದೆಸೆಯಿಂದ ನಂಜನಗೂಡು ಸರ್ಕಾರಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವಾಗಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ದೊಡ್ಡಯ್ಯ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿ ಘಟನೆಯ ಸವಿವಾರವನ್ನು ತಿಳಿದು ಪ್ರಕರಣ ದಾಖಲಿಸಿಕೊಂಡು ಕಿರಾತಕ ಆರೋಪಿಯ ಬಂಧನಕ್ಕೆ ಹುಲ್ಲಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು