8:33 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿ ಮೇಲೆರಗಿದ ಕಾಮುಕ: ಬೊಬ್ಬೆ ಕೇಳಿ ಓಡಿ ಬಂದ ಪತಿ ಜತೆ ಪತ್ನಿಗೂ ಕುಡುಗೋಲಿನಿಂದ ಹಲ್ಲೆ

18/12/2023, 12:19

ಮೋಹನ್ ನಂಜನಗೂಡು ಮೈಸೂರು

info.reporterkarnataka@ gmail.com

ನಂಜನಗೂಡು ತಾಲೂಕಿನ ಹೊಸ ಕಡಜೇಟಿ ಗ್ರಾಮದ ಮಹದೇವಸ್ವಾಮಿ ಆತನ ಪತ್ನಿ ಸುಜಾತ ಎಂಬುವರು ಕಂದೇಗಾಲ ಸಮೀಪವಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.


ಕೆಲಸ ಮಾಡುವ ತೋಟದ ಒಳಭಾಗದಲ್ಲಿ ವಿದ್ಯುತ್ ಫೀಸ್ ಹಾಕಲು ತೆರಳಿದ ವಿವಾಹಿತ ಮಹಿಳೆಯ ಪತಿ ಮಹದೇವಸ್ವಾಮಿ ಇಲ್ಲದೆ ಇರುವ ಸಮಯವನ್ನೇ ನೋಡಿ ತೋಟದ ಮನೆಯ ಬಳಿ ಒಬ್ಬಂಟಿ ಮಹಿಳೆ ಇರುವುದನೆ ಗಮನಿಸಿದ ಕಾಮುಕ ನವೀನ ಎಂಬಾತ ಏಕಾಏಕಿ ತಂತಿ ಬೇಲಿಯನ್ನು ಜಿಗಿದು ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಸುಜಾತ ಎಂಬುವರ ಮೇಲೇರಗಿ ಚಿರಟ ಮಾಡದಂತೆ ಬಾಯಿಗೆ ಬಟ್ಟೆಯನ್ನು ತುರುಕಿ ಬಲತ್ಕಾರಕ್ಕೆ ಮುಂದಾಗಿದ್ದಾನೆ. ಕಿರಾತಕ ನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಚೀರಾಟ ಮಾಡುತ್ತಿರುವುದನ್ನು ಕೇಳಿ ಸಮೀಪದಲ್ಲಿ ಇದ್ದ ಸುಜಾತಳ ಗಂಡ ಮಹದೇವಸ್ವಾಮಿ ಸ್ಥಳಕ್ಕೆ ಆಗಮಿಸಿದಾಗ ಆತನ ಮೇಲೆಯೂ ಕುಡುಗೋಲಿನಿಂದ ಹಲ್ಲೆ ಮಾಡಿ ಸ್ಥಳದಿಂದ ಕಾಮುಕ ನವೀನ ಪರಾರಿಯಾಗಿದ್ದಾನೆ.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸುಜಾತ ಮತ್ತು ಆತನ ಪತಿ ಮಹದೇವಸ್ವಾಮಿ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಜಾತಳ ಮೈ ಭಾಗದ ವಿವಿಧ ಭಾಗಗಳಲ್ಲಿ ಕಚ್ಚಿರುವ ಗುರುತು ಮತ್ತು ಕುಡುಗೋಲಿನಿಂದ ಹಲ್ಲೆ ಮಾಡಿರುವ ದೆಸೆಯಿಂದ ನಂಜನಗೂಡು ಸರ್ಕಾರಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವಾಗಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ದೊಡ್ಡಯ್ಯ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿ ಘಟನೆಯ ಸವಿವಾರವನ್ನು ತಿಳಿದು ಪ್ರಕರಣ ದಾಖಲಿಸಿಕೊಂಡು ಕಿರಾತಕ ಆರೋಪಿಯ ಬಂಧನಕ್ಕೆ ಹುಲ್ಲಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು