5:44 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವ: 18 ಮೆಟ್ಟಿಲುಗಳ ಪಡಿ ಪೂಜೆ

18/12/2023, 22:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಕಪಿಲಾ ನದಿ ತೀರದಲ್ಲಿರುವ ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ಬ್ರಹ್ಮೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು.


ಶ್ರೀ ಕ್ಷೇತ್ರ ಶಬರಿಮಲೆಯ ಮಾದರಿಯಲ್ಲೇ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಾಲಯದ ಗುರುಸ್ವಾಮಿಗಳಾದ ದೇವರಾಜ ಸ್ವಾಮಿಗಳ ನೇತೃತ್ವದಲ್ಲಿ ಪಡಿ ಪೂಜೆ ನಡೆಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳೂ ಸೇರಿದಂತೆ ದೇವಾಲಯವನ್ನು ವಿವಿಧ ಬಗೆಯ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಳಿಕ ಚೆಂಡೆ ಮೇಳದೊಂದಿಗೆ ಶ್ರೀ ಕ್ಷೇತ್ರ ಶಬರಿಮಲೆಯ ಅರ್ಚಕರಿಂದ ಪವಿತ್ರ 18 ಮೆಟ್ಟಿಲುಗಳಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪವಿತ್ರ ಮೆಟ್ಟಿಲುಗಳನ್ನು ಶುದ್ದಿ ಗೊಳಿಸಲಾಯಿತು. ನಂತರ ಮೆಟ್ಟಿಲುಗಳಿಗೆ ಇಡುಗಾಯಿ ಒಡೆದು ಕರ್ಪೂರ ಹಚ್ಚಿ ಪುಷ್ಪಾರ್ಚನೆ ಮಾಡುವ ಮೂಲಕ ಅಯ್ಯಪ್ಪನ ನಾಮಸ್ಮರಣೆಯೊಂದಿಗೆ ಗುರುಸ್ವಾಮಿಗಳು ಸೇರಿದಂತೆ ಅಯ್ಯಪ್ಪನ ಭಕ್ತರು 18 ಮೆಟ್ಟಿಲುಗಳನ್ನು ಹತ್ತಿ ಬಂದು ಶ್ರೀ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದು ಪುಳಕಿತರಾದರು.


ಶ್ರೀ ಸ್ವಾಮಿಗೆ ಮಹಾ ಮಂಗಳಾರತಿ ಸಲ್ಲಿಸಿ ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಪಟ್ಟಣವು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಸಾವಿರಾರು ಭಕ್ತರು ಪಡಿ ಪೂಜಿಯಲ್ಲಿ ಭಾಗವಹಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯದ ಶಾಸ್ತ ಕಲಾ ಮಂಟಪದಲ್ಲಿ ನಂಜನಗೂಡಿನ ಸುರಭಿ ಗಾನ ಸಂಘದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯದ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು