3:20 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಮಹಾರಥೋತ್ಸವ ಸಂಪನ್ನ: ರಥಾರೂಢರಾಗಿ ವಿರಾಜಿಸಿದ ಸುಬ್ರಹ್ಮಣ್ಯ ದೇವರು; ಸಾವಿರಾರು ಭಕ್ತರು ಭಾಗಿ

19/12/2023, 17:51

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ದೇಶದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಚಂಪಾ ಷಷ್ಠಿಯ ಮಹಾರಥೋತ್ಸವ ಇಂದು ಬೆಳಗ್ಗೆ ನೆರವೇರಿತು. ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆಸೀನರಾಗಿ ರಥೋತ್ಸವ ನಡೆಯಿತು.


ಸಾವಿರಾರು ಭಕ್ತರು ಸೇರಿ ದೇವರ ಮಹಾರಥವನ್ನು ಎಳೆದರು. ಬ್ರಹ್ಮರಥವು ರಥಬೀದಿಯಲ್ಲಿ ಮುನ್ನಡೆಯಿತು. ವರ್ಷದಲ್ಲಿ ಒಂದು ಬಾರಿ ನಡೆಯುವ ರಥೋತ್ಸವ ಸಂದರ್ಭ ಸಹಸ್ರಾರು ಮಂದಿ ಶ್ರೀ ದೇವರ ವೈಭವದ ರಥೋತ್ಸವ ವೀಕ್ಷಿಸಿ ಕೃತಾರ್ಥರಾದರು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ರಥೋತ್ಸವದ ಮೊದಲು ದೇವಸ್ಥಾನದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಅನಂತರ ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್, ಜಾಗಟೆ, ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ 7.33 ಧನುರ್ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಈ ಸಂದರ್ಭದಲ್ಲಿ
ಈ ಸಂದರ್ಭಗಳಲ್ಲಿ ಸುಳ್ಯ ದ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲೈ ಮುಗಿಲನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಂ ಸುಳ್ಳಿ, ಎಸ್.ಪಿ ಸಿ.ಬಿ ರಿಷ್ಯಂತ್, ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್, ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್.ಪ್ರಸಾದ್, ಮನೋಹರ ರೈ, ಶ್ರೀವತ್ಸಾ, ಕಡಬ, ಲೊಕೇಶ್ ಮುಂಡೊಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್ ಸೇರಿದಂತೆ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು, ದೇವಳದ ಸಿಬ್ಬಂದಿಗಳು ಸೇರಿದಂತೆ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು