5:31 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯ ಮಕ್ಕಳಲ್ಲಿ ಬೆಳೆಸಬೇಕು: ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ

20/12/2023, 11:19

ಬಂಟ್ವಾಳ(reporterkarnataka.com): ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಹೇಳಿದರು.
ಅವರು ಮಾಣಿ ದ.ಕ.ಜಿ.ಪ.ಮಾ.ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಏರ್ಪಡಿಸಲಾದ ಭಾಷಾ ಬೋಧನೆಯ ತರಬೇತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ನಲಿ-ಕಲಿ ಶಿಕ್ಷಕರು ಚಟುವಟಿಕೆಯೊಂದಿಗೆ ಪರಿಣಾಮಕಾರಿಯಾಗಿ ಕನ್ನಡ ಭಾಷಾ ಕಲಿಕೆಯಲ್ಲಿ ಉಚ್ಚಾರ ಮತ್ತು ಅಕ್ಷರ ದೋಷಗಳನ್ನು ತಿದ್ದುವ ಬಗ್ಗೆ ಚರ್ಚಿಸಲಾಯಿತು. ಮಮತಾ ಕಿರಣ್ ಬಂಟ್ರಿಂಜ , ಶಾಂತಿ ಪಾಯಸ್ ಸತ್ತಿಕಲ್ಲು, ಚೇತನಾ ಬಾಲ್ತಿಲ ಕಂಠಿಕ, ಶೀಲಾವತಿ ಮಾಣಿ ಅನಿಸಿಕೆ ವ್ಯಕ್ತಪಡಿಸಿದರು. ಸಮಾಲೋಚನಾ ಸಭೆಯಲ್ಲಿ ಮಾಣಿ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಣಿ ವಲಯ ಸಿಆರ್‌ಪಿ ಸತೀಶ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಮಾಣಿ ವಂದಿಸಿದರು. ಕೆದಿಲ ಸಿಆರ್‌ಪಿ ಸುಧಾಕರ ಭಟ್ , ಕಾರ್ಲ ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ, ಶಿಕ್ಷಣ ಸಂಯೋಜಕಿ ಪ್ರತಿಮಾ ವೈ. ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು