4:42 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಯಕ್ಷಗಾನ ವೇಷಧಾರಿ ರವಿರಾಜ ಪನೆಯಾಲಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ

20/12/2023, 12:10

ಮಂಗಳೂರು(reporterkarnataka.com): ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು ಯಕ್ಷಗಾನದಲ್ಲೂ ಕೃಷಿ ಮಾಡುತ್ತಿರುವ ಪನೆಯಾಲರು ಯುವ ಕಲಾವಿದರಿಗೆ ಆದರ್ಶ ಯಕ್ಷಗಾನ ಬಯಲಾಟ ತುಳುನಾಡಿನ ಜೀವನಾಡಿ, ಸಾವಿರಕ್ಕೂ ಮಿಕ್ಕಿ ವೃತ್ತಿಪರ ಕಲಾವಿದರು, ಹತ್ತು ಸಾವಿರಕ್ಕೂ ಮಿಕ್ಕಿ ಹವ್ಯಾಸಿಗಳು ಇರುವ ಕ್ಷೇತ್ರಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಕಲಿಯಲು ಬರುತ್ತಿರುವುದು ಕಲೆಯ ವಿಶೇಷ ಶಕ್ತಿ ಎಂದರು.
ಪ್ರಶಸ್ತಿ ಸ್ವೀಕರಿಸಿದ ರವಿರಾಜ‌ ಪನೆಯಾಲ ಮಾತನಾಡಿ, ಯಕ್ಷವೇಷ ಧರಿಸಿದ ನನಗೆ ಸನ್ಮಾನ ಮಾಡಿದ್ದೀರಿ. ‌ರಂಗದಲ್ಲಿ ಮಾಡುವ ಪಾತ್ರಗಳಿಗೆ ಈ ಪ್ರಶಸ್ತಿ. ಇದು ಯಕ್ಷಗಾನ ಕಲೆಗೆ ಸಂದ ಗೌರವ ಎಂದರು.

ಕಾರ್ಪೊರೇಟರ್ ಮನೋಹರ ಶೆಟ್ಟಿ ಕದ್ರಿ, ಕಾರ್ಪೊರೇಟರ್ ಶಕಿಲಾ ಕಾವ, ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್ ಕದ್ರಿ, ಪೊಳಲಿ ಗಿರಿಪ್ರಕಾಶ್ ತಂತ್ರಿ, ಸುಧಾಕರ ರಾವ್ ಪೇಜಾವರ, ಆಯೋಜಕರಾದ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ದೀಪಾ. ಕೆ.ಎಸ್., ಋತ್ವಿಕ್ ಅಲೆವೂರಾಯ, ಸಂಹಿತಾ ಅಲೆವೂರಾಯ, ಸುಜಾತ ಕುಮಾರಿ, ರಾಘವೇಂದ್ರ ಭಟ್ ಇದ್ದರು.
ಯಕ್ಷಕೂಟ ಸಂಚಾಲಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ನಿರೂಪಿಸಿ ವಂದಿಸಿದರು.
ಆಸ್ರಣ್ಣ ಭೇಟಿ: ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ ಭೇಟಿ‌ ನೀಡಿ, ಚೌಕಿಯಲ್ಲಿ ದೇವರ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು