9:57 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಯಕ್ಷಗಾನ ವೇಷಧಾರಿ ರವಿರಾಜ ಪನೆಯಾಲಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ

20/12/2023, 12:10

ಮಂಗಳೂರು(reporterkarnataka.com): ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು ಯಕ್ಷಗಾನದಲ್ಲೂ ಕೃಷಿ ಮಾಡುತ್ತಿರುವ ಪನೆಯಾಲರು ಯುವ ಕಲಾವಿದರಿಗೆ ಆದರ್ಶ ಯಕ್ಷಗಾನ ಬಯಲಾಟ ತುಳುನಾಡಿನ ಜೀವನಾಡಿ, ಸಾವಿರಕ್ಕೂ ಮಿಕ್ಕಿ ವೃತ್ತಿಪರ ಕಲಾವಿದರು, ಹತ್ತು ಸಾವಿರಕ್ಕೂ ಮಿಕ್ಕಿ ಹವ್ಯಾಸಿಗಳು ಇರುವ ಕ್ಷೇತ್ರಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಕಲಿಯಲು ಬರುತ್ತಿರುವುದು ಕಲೆಯ ವಿಶೇಷ ಶಕ್ತಿ ಎಂದರು.
ಪ್ರಶಸ್ತಿ ಸ್ವೀಕರಿಸಿದ ರವಿರಾಜ‌ ಪನೆಯಾಲ ಮಾತನಾಡಿ, ಯಕ್ಷವೇಷ ಧರಿಸಿದ ನನಗೆ ಸನ್ಮಾನ ಮಾಡಿದ್ದೀರಿ. ‌ರಂಗದಲ್ಲಿ ಮಾಡುವ ಪಾತ್ರಗಳಿಗೆ ಈ ಪ್ರಶಸ್ತಿ. ಇದು ಯಕ್ಷಗಾನ ಕಲೆಗೆ ಸಂದ ಗೌರವ ಎಂದರು.

ಕಾರ್ಪೊರೇಟರ್ ಮನೋಹರ ಶೆಟ್ಟಿ ಕದ್ರಿ, ಕಾರ್ಪೊರೇಟರ್ ಶಕಿಲಾ ಕಾವ, ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್ ಕದ್ರಿ, ಪೊಳಲಿ ಗಿರಿಪ್ರಕಾಶ್ ತಂತ್ರಿ, ಸುಧಾಕರ ರಾವ್ ಪೇಜಾವರ, ಆಯೋಜಕರಾದ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ದೀಪಾ. ಕೆ.ಎಸ್., ಋತ್ವಿಕ್ ಅಲೆವೂರಾಯ, ಸಂಹಿತಾ ಅಲೆವೂರಾಯ, ಸುಜಾತ ಕುಮಾರಿ, ರಾಘವೇಂದ್ರ ಭಟ್ ಇದ್ದರು.
ಯಕ್ಷಕೂಟ ಸಂಚಾಲಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ನಿರೂಪಿಸಿ ವಂದಿಸಿದರು.
ಆಸ್ರಣ್ಣ ಭೇಟಿ: ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ ಭೇಟಿ‌ ನೀಡಿ, ಚೌಕಿಯಲ್ಲಿ ದೇವರ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು