11:15 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಯಕ್ಷಗಾನ ವೇಷಧಾರಿ ರವಿರಾಜ ಪನೆಯಾಲಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ

20/12/2023, 12:10

ಮಂಗಳೂರು(reporterkarnataka.com): ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು ಯಕ್ಷಗಾನದಲ್ಲೂ ಕೃಷಿ ಮಾಡುತ್ತಿರುವ ಪನೆಯಾಲರು ಯುವ ಕಲಾವಿದರಿಗೆ ಆದರ್ಶ ಯಕ್ಷಗಾನ ಬಯಲಾಟ ತುಳುನಾಡಿನ ಜೀವನಾಡಿ, ಸಾವಿರಕ್ಕೂ ಮಿಕ್ಕಿ ವೃತ್ತಿಪರ ಕಲಾವಿದರು, ಹತ್ತು ಸಾವಿರಕ್ಕೂ ಮಿಕ್ಕಿ ಹವ್ಯಾಸಿಗಳು ಇರುವ ಕ್ಷೇತ್ರಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಕಲಿಯಲು ಬರುತ್ತಿರುವುದು ಕಲೆಯ ವಿಶೇಷ ಶಕ್ತಿ ಎಂದರು.
ಪ್ರಶಸ್ತಿ ಸ್ವೀಕರಿಸಿದ ರವಿರಾಜ‌ ಪನೆಯಾಲ ಮಾತನಾಡಿ, ಯಕ್ಷವೇಷ ಧರಿಸಿದ ನನಗೆ ಸನ್ಮಾನ ಮಾಡಿದ್ದೀರಿ. ‌ರಂಗದಲ್ಲಿ ಮಾಡುವ ಪಾತ್ರಗಳಿಗೆ ಈ ಪ್ರಶಸ್ತಿ. ಇದು ಯಕ್ಷಗಾನ ಕಲೆಗೆ ಸಂದ ಗೌರವ ಎಂದರು.

ಕಾರ್ಪೊರೇಟರ್ ಮನೋಹರ ಶೆಟ್ಟಿ ಕದ್ರಿ, ಕಾರ್ಪೊರೇಟರ್ ಶಕಿಲಾ ಕಾವ, ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್ ಕದ್ರಿ, ಪೊಳಲಿ ಗಿರಿಪ್ರಕಾಶ್ ತಂತ್ರಿ, ಸುಧಾಕರ ರಾವ್ ಪೇಜಾವರ, ಆಯೋಜಕರಾದ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ದೀಪಾ. ಕೆ.ಎಸ್., ಋತ್ವಿಕ್ ಅಲೆವೂರಾಯ, ಸಂಹಿತಾ ಅಲೆವೂರಾಯ, ಸುಜಾತ ಕುಮಾರಿ, ರಾಘವೇಂದ್ರ ಭಟ್ ಇದ್ದರು.
ಯಕ್ಷಕೂಟ ಸಂಚಾಲಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ನಿರೂಪಿಸಿ ವಂದಿಸಿದರು.
ಆಸ್ರಣ್ಣ ಭೇಟಿ: ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ ಭೇಟಿ‌ ನೀಡಿ, ಚೌಕಿಯಲ್ಲಿ ದೇವರ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು