6:35 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು