1:56 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು