10:13 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ

05/08/2021, 18:09

ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು.

ಮಂಜೇಶ್ವರ ಶಾಸಕ ಆಶ್ರಫ್ ಅವರು ಸಬ್ ಮಿಷನ್ ಮೂಲಕ ವಿಷಯ ಪ್ರಸ್ತಾಪಿಸಿ, ಅನಾದಿ ಕಾಲದಿಂದಲೂ ಮಂಜೇಶ್ವರ, ಕಾಸರಗೋಡು ಪ್ರದೇಶದ ಜನರು ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರಕ್ಕಾಗಿ ನೆರೆಯ ಮಂಗಳೂರು ನಗರವನ್ನು ಆಶ್ರಯಿಸಿದ್ದಾರೆ. ಆದರೆ ಕೋವಿಡ್ ನೆಪವೊಡ್ಡಿ ಕರ್ನಾಟಕದ ನೂತನ ಮುಖ್ಯಮಂತ್ರಿಯವರು 72 ತಾಸುಗಳೊಳಗಿನ ಆರ್ ಟಿಪಿಸಿಆರ್ ರಿಪೋರ್ಟ್ ಇದ್ದವರಿಗೆ ಮಾತ್ರ ತಲಪಾಡಿ ಗಡಿ ಮೂಲಕ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಎರಡು ಡೋಸ್ ವಾಕ್ಸಿನ್ ಪಡೆದವರಿಗೂ ಅವಕಾಶ ನೀಡುತ್ತಿಲ್ಲ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಡಯಾಲಿಸಿಸ್ ಮಾಡುವವರಿಗೆ, ಇತರ ಕಾಯಿಲೆ ಉಳ್ಳರಿಗೆ, ಉದ್ಯೋಗ ಹೊಂದಿದವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಇದು ಕೇಂದ್ರ ಸರಕಾರದ ನಿಯಮಗಳ ಉಲ್ಲಂಘನೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದು ಸೂಕ್ತವಾಗಿ ನಿಭಾಯಿಸುವ ಬಗ್ಗೆ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು