9:19 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಟ್ಯಾಂಕರ್ ಲಾರಿ- ಬೈಕ್ ನಡುವೆ ಭೀಕರ ಅಘಪಾತ: ಇಬ್ಬರ ಬಲಿ; ಸಾವಿನಲ್ಲೂ ಒಂದಾದ ಕುಚುಕು ಗೆಳೆಯರು!

20/12/2023, 18:24

ಮೋಹನ್ ನಂಜನಗೂಡು ಮೈಸೂರು

info.reporterarnataka@gmail.com

ನಂಜನಗೂಡು ತಾಲೂಕು ಮಲ್ಲೂಪುರ ಗ್ರಾಮದಲ್ಲಿ ನಡೆದ
ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತದಲ್ಲಿ ಇಬ್ಬರು ಪ್ರಾಣ ಸ್ನೇಹಿತರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ.
ಸಕ್ಕರೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿದ್ದ ತಗಡೂರು ಗ್ರಾಮದ ಶಿವಮಲ್ಲೆಗೌಡ ಎಂಬುವರ ಪುತ್ರ ಮಹೇಶ್ (24) ಹಾಗೂ ಅದೇ ಗ್ರಾಮದ ನಾಗರಾಜು ಎಂಬುವವರ ಪುತ್ರ ಮಹೇಶ್ (23) ಮೃತ ಗೆಳೆಯರು. ಇವರು
ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್ ಸಕ್ಕರ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಮಲ್ಲೂಪುರ ಬಳಿ ಟ್ಯಾಂಕರ್ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ.


ಮತ್ತೊರ್ವ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಇಬ್ಬರೂ ಚಿಕ್ಕ ವಯಸ್ಸಿನಿಂದಲೂ ಗೆಳಯರಾಗಿದ್ದರು.
ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಟ್ಯಾಂಕರ್ ಲಾರಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟ್ಯಾಂಕರ್ ಲಾರಿಯ ಚಾಲಕ ಸ್ಥಳದಿಂದ ನಾಪತ್ತೆ.
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು