7:13 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು

20/12/2023, 23:19

ಮಂಗಳೂರು(reporterkarnataka.com): ಡ್ರಗ್ಸ್ ಸೇವನೆ,ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಡ್ರಗ್ಸ್ ವ್ಯಸನಕ್ಕೆ ಸಹಾಯ ಮಾಡಿದರೂ ನೀವು ಅಪರಾಧಿಗಳಾಗಿರುತ್ತೀರಾ. ಆದ್ದರಿಂದ, ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ ಎಂದು ಎಸಿಪಿ ಗೀತಾ ಕುಲಕರ್ಣಿ ಹೇಳಿದರು.


ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೆಪಿಟಿಯಲ್ಲಿ
ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್, ಮಂಗಳೂರು ಸಂಚಾರ ಉಪ ವಿಭಾಗ ಹಾಗೂ ಸಂಚಾರಿ ಪೂರ್ವ ಠಾಣೆ ವತಿಯಿಂದ ನಡೆದ ಅಪರಾಧ ಮಾಸಚರಣೆ 2023 ಮಾದಕ ದ್ರವ್ಯ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಮಾತನಾಡಿ, ನಿಮ್ಮ ಮನಸಿನಲ್ಲಿ ಯಾವುದೇ ಯಾತನೆಗಳಿದ್ದರೂ ಅದನ್ನು ನಿಮ್ಮ ತಂದೆ, ತಾಯಿ, ಶಿಕ್ಷಕರಲ್ಲಿ, ಅಥವಾ ಆತ್ಮೀಯರಲ್ಲಿ ಹಂಚಿಕೊಳ್ಳಿ, ಮಾದಕ ವ್ಯಸನಕ್ಕೆ ದಾಸರಾಗಿ,ಆತ್ಮಹತ್ಯೆಗೆ ಬಲಿಯಾಗಬೇಡಿ ಎಂದು ಕಿವಿ ಮಾತು ಹೇಳಿದರು.

ಎಲೆಕ್ಟ್ರಿಕಲ್ ಮೇಕನಿಕ್ ಉಪನ್ಯಾಸಕಿ ಸುರೇಖಾ,ಎಸ್ ಐ ವಿಜಯ್ ಮತ್ತಿರರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು