1:28 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಶ್ರೀರಾಮ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಳ ಚಿಕಿತ್ಸೆಗೆ 2 ಲಕ್ಷ ರೂ. ನೆರವು: ಡಾ. ಪ್ರಭಾಕರ ಭಟ್ ಚೆಕ್ ಹಸ್ತಾಂತರ

21/12/2023, 13:31

ಬಂಟ್ವಾಳ(reporterjarnataka.com):ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ 9ನೇ ತರಗತಿಯಲ್ಲಿ ಓದುತ್ತಿರುವ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ನಳಿನಿ ಅವರ ಪುತ್ರಿ ಕಾವ್ಯ ಎಂಬ ಬಾಲಕಿ ಎಸ್‌ಎಲ್‌ಇ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಅವಳಿಗೆ ಚಿಕಿತ್ಸಾ ವೆಚ್ಚವಾಗಿ
ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಸಂಗ್ರಹವಾದ 2 ಲಕ್ಷ ರೂ. ಚೆಕ್ಕನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ
ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ, ಡಾ.ಕೊಂಕೋಡಿ ಕೃಷ್ಣ ಭಟ್ , ಕೋಶಾಧಿಕಾರಿ ಅಚ್ಯುತ ನಾಯಕ್, ವಿವೇಕಾನಂದ ಕನ್ನಡ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರಾಗಿರುವ ಸುಬ್ರಹ್ಮಣ್ಯ
ಭಟ್ ಕೆದಿಲ, ಡಾ.ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ ಎನ್, ಪ್ರೌಢಶಾಲಾ ಶಿಕ್ಷಣ ಪರಿವೀಕ್ಷಕರಾದ ಲಕ್ಷ್ಮಿ ರಘುರಾಜ್, ಸುಧಾ ಸೂರ್ಯನಾರಾಯಣ ಭಟ್, ಮುಖ್ಯೋಪಾಧ್ಯಾಯರು ಗೋಪಾಲ ಎಂ. ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು