1:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ

05/08/2021, 18:32

ಮಂಗಳೂರು(Reporterkarnataka.com)
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.

ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ತೀವ್ರಗೊಂಡ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ, ಗಡಿಗಳ ಚೆಕ್ ಪೋಸ್ಟ್‍ಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ, ಆದ ಕಾರಣ ಕೇರಳ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲೀ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು.

.

ಇತ್ತೀಚಿನ ಸುದ್ದಿ

ಜಾಹೀರಾತು