3:37 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು

21/12/2023, 20:59

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಕಿರಣ್ ಗೌಡ ಎಂಬ ರೈತ ತನ್ನ ಮೂರೂವರೆ ಎಕರೆ ಜಮೀನಿನಲ್ಲಿ ಕರ್ಬುಜ ಹಣ್ಣನ್ನು ಬೆಳೆದಿದ್ದಾರೆ. ಆದರೆ ಫಸಲು ಕೈ ಸೇರಬೇಕು ಅನ್ನುವಷ್ಟರಲ್ಲಿ, ಕರ್ಬುಜ ಹಣ್ಣುಗಳು ಹೊಸ ಬಗೆಯ ರೋಗಕ್ಕೆ ತುತ್ತಾಗಿ ಹಣ್ಣುಗಳು ಡ್ಯಾಮೇಜ್ ಆಗಿ ಹೋಗುತ್ತಿದ್ದು. ಇದರಿಂದ ಒಂದು ಹಣ್ಣನ್ನು ಸಹ ಮಾರಾಟ ಮಾಡದೆ ಕರ್ಬುಜ ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.
ಅನಂತಪುರದ ಶ್ರಾವಣಿ ಅಂಗಡಿಯಲ್ಲಿ, ಪಟಜಮ್ ತಳಿಯ ನಿರ್ಮಲಾ 24-24 ಬೀಜವನ್ನು ತಂದು ಬಿತ್ತನೆ ಮಾಡಿದ್ದಾರೆ. ಬೆಳೆಯು ಸಹ ಉತ್ತಮ ರೀತಿಯಲ್ಲಿ ಬಂದಿದ್ದು, ಫಸಲಿಗೆ ಬಂದಂತಹ ಸಮಯದಲ್ಲಿ ಹಣ್ಣುಗಳು ಸಂಪೂರ್ಣವಾಗಿ ಹೊಸ ರೀತಿಯ ರೋಗಕ್ಕೆ ತುತ್ತಾಗುತ್ತಿದ್ದು. ಇದರಿಂದ ರೈತನ ಕೈ ಸೇರಬೇಕಿದ್ದ 25 ರಿಂದ 30 ಟನ್ ಹಣ್ಣು ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೆ ಆಗಿದೆ.
ಬರಗಾಲದಲ್ಲಿ ಎರಡು ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿ ಕರ್ಬುಜ ಹಣ್ಣನ್ನು ಬೆಳೆಯಲು ಮುಂದಾಗಿದ್ದೇನೆ. ಆದರೆ ಫಸಲಿಗೆ ಬಂದ ಹಣ್ಣುಗಳು ಸಂಪೂರ್ಣವಾಗಿ ರೋಗಕ್ಕೆ ತುತ್ತಾಗಿ ಆಗಿ ಹೋಗುತ್ತಿವೆ. ಇದರಿಂದ ಅಂಗಡಿಯಿಂದ ತಂದ ಬೀಜದ ಫಾಲ್ಟ್ ಅಥವಾ ಹೊಸ ತಳಿಯ ರೋಗ ಬಂದಿದೆಯಾ ಎಂಬುದು ತಿಳಿಯುತ್ತಿಲ್ಲ. ಬೆಳೆಯು ಸಂಪೂರ್ಣವಾಗಿ ನಷ್ಟವಾಗಿದ್ದು, ಇದರಿಂದ ಬೆಳೆಯನ್ನು ನಾಶಪಡಿಸಲು ಮುಂದಾಗಿದ್ದೇನೆ ಎಂದು ರೈತ ಕಿರಣ್ ಗೌಡ ಹೇಳುತ್ತಾರೆ.
ಇದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೈತರ ಜಮೀನಿಗೆ ಬಂದು ಸಂಶೋಧನೆ ನಡೆಸಿ ರೈತರ ಕೈ ಸೇರಬೇಕಿದ್ದ ಬೆಳೆಗೆ ಏನು ತೊಂದರೆ ಆಗಿದೆ ಎಂಬುದನ್ನು ತಿಳಿಸಿ.ಇಲಾಖೆ ವತಿಯಿಂದ ಪರಿಹಾರ ಕೊಡಬೇಕು ಎಂದು ಯುವ ರೈತ ಕಿರಣ್ ಗೌಡ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು