8:31 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು

21/12/2023, 20:59

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಕಿರಣ್ ಗೌಡ ಎಂಬ ರೈತ ತನ್ನ ಮೂರೂವರೆ ಎಕರೆ ಜಮೀನಿನಲ್ಲಿ ಕರ್ಬುಜ ಹಣ್ಣನ್ನು ಬೆಳೆದಿದ್ದಾರೆ. ಆದರೆ ಫಸಲು ಕೈ ಸೇರಬೇಕು ಅನ್ನುವಷ್ಟರಲ್ಲಿ, ಕರ್ಬುಜ ಹಣ್ಣುಗಳು ಹೊಸ ಬಗೆಯ ರೋಗಕ್ಕೆ ತುತ್ತಾಗಿ ಹಣ್ಣುಗಳು ಡ್ಯಾಮೇಜ್ ಆಗಿ ಹೋಗುತ್ತಿದ್ದು. ಇದರಿಂದ ಒಂದು ಹಣ್ಣನ್ನು ಸಹ ಮಾರಾಟ ಮಾಡದೆ ಕರ್ಬುಜ ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.
ಅನಂತಪುರದ ಶ್ರಾವಣಿ ಅಂಗಡಿಯಲ್ಲಿ, ಪಟಜಮ್ ತಳಿಯ ನಿರ್ಮಲಾ 24-24 ಬೀಜವನ್ನು ತಂದು ಬಿತ್ತನೆ ಮಾಡಿದ್ದಾರೆ. ಬೆಳೆಯು ಸಹ ಉತ್ತಮ ರೀತಿಯಲ್ಲಿ ಬಂದಿದ್ದು, ಫಸಲಿಗೆ ಬಂದಂತಹ ಸಮಯದಲ್ಲಿ ಹಣ್ಣುಗಳು ಸಂಪೂರ್ಣವಾಗಿ ಹೊಸ ರೀತಿಯ ರೋಗಕ್ಕೆ ತುತ್ತಾಗುತ್ತಿದ್ದು. ಇದರಿಂದ ರೈತನ ಕೈ ಸೇರಬೇಕಿದ್ದ 25 ರಿಂದ 30 ಟನ್ ಹಣ್ಣು ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೆ ಆಗಿದೆ.
ಬರಗಾಲದಲ್ಲಿ ಎರಡು ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿ ಕರ್ಬುಜ ಹಣ್ಣನ್ನು ಬೆಳೆಯಲು ಮುಂದಾಗಿದ್ದೇನೆ. ಆದರೆ ಫಸಲಿಗೆ ಬಂದ ಹಣ್ಣುಗಳು ಸಂಪೂರ್ಣವಾಗಿ ರೋಗಕ್ಕೆ ತುತ್ತಾಗಿ ಆಗಿ ಹೋಗುತ್ತಿವೆ. ಇದರಿಂದ ಅಂಗಡಿಯಿಂದ ತಂದ ಬೀಜದ ಫಾಲ್ಟ್ ಅಥವಾ ಹೊಸ ತಳಿಯ ರೋಗ ಬಂದಿದೆಯಾ ಎಂಬುದು ತಿಳಿಯುತ್ತಿಲ್ಲ. ಬೆಳೆಯು ಸಂಪೂರ್ಣವಾಗಿ ನಷ್ಟವಾಗಿದ್ದು, ಇದರಿಂದ ಬೆಳೆಯನ್ನು ನಾಶಪಡಿಸಲು ಮುಂದಾಗಿದ್ದೇನೆ ಎಂದು ರೈತ ಕಿರಣ್ ಗೌಡ ಹೇಳುತ್ತಾರೆ.
ಇದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೈತರ ಜಮೀನಿಗೆ ಬಂದು ಸಂಶೋಧನೆ ನಡೆಸಿ ರೈತರ ಕೈ ಸೇರಬೇಕಿದ್ದ ಬೆಳೆಗೆ ಏನು ತೊಂದರೆ ಆಗಿದೆ ಎಂಬುದನ್ನು ತಿಳಿಸಿ.ಇಲಾಖೆ ವತಿಯಿಂದ ಪರಿಹಾರ ಕೊಡಬೇಕು ಎಂದು ಯುವ ರೈತ ಕಿರಣ್ ಗೌಡ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು