7:31 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು

21/12/2023, 20:59

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಕಿರಣ್ ಗೌಡ ಎಂಬ ರೈತ ತನ್ನ ಮೂರೂವರೆ ಎಕರೆ ಜಮೀನಿನಲ್ಲಿ ಕರ್ಬುಜ ಹಣ್ಣನ್ನು ಬೆಳೆದಿದ್ದಾರೆ. ಆದರೆ ಫಸಲು ಕೈ ಸೇರಬೇಕು ಅನ್ನುವಷ್ಟರಲ್ಲಿ, ಕರ್ಬುಜ ಹಣ್ಣುಗಳು ಹೊಸ ಬಗೆಯ ರೋಗಕ್ಕೆ ತುತ್ತಾಗಿ ಹಣ್ಣುಗಳು ಡ್ಯಾಮೇಜ್ ಆಗಿ ಹೋಗುತ್ತಿದ್ದು. ಇದರಿಂದ ಒಂದು ಹಣ್ಣನ್ನು ಸಹ ಮಾರಾಟ ಮಾಡದೆ ಕರ್ಬುಜ ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.
ಅನಂತಪುರದ ಶ್ರಾವಣಿ ಅಂಗಡಿಯಲ್ಲಿ, ಪಟಜಮ್ ತಳಿಯ ನಿರ್ಮಲಾ 24-24 ಬೀಜವನ್ನು ತಂದು ಬಿತ್ತನೆ ಮಾಡಿದ್ದಾರೆ. ಬೆಳೆಯು ಸಹ ಉತ್ತಮ ರೀತಿಯಲ್ಲಿ ಬಂದಿದ್ದು, ಫಸಲಿಗೆ ಬಂದಂತಹ ಸಮಯದಲ್ಲಿ ಹಣ್ಣುಗಳು ಸಂಪೂರ್ಣವಾಗಿ ಹೊಸ ರೀತಿಯ ರೋಗಕ್ಕೆ ತುತ್ತಾಗುತ್ತಿದ್ದು. ಇದರಿಂದ ರೈತನ ಕೈ ಸೇರಬೇಕಿದ್ದ 25 ರಿಂದ 30 ಟನ್ ಹಣ್ಣು ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೆ ಆಗಿದೆ.
ಬರಗಾಲದಲ್ಲಿ ಎರಡು ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿ ಕರ್ಬುಜ ಹಣ್ಣನ್ನು ಬೆಳೆಯಲು ಮುಂದಾಗಿದ್ದೇನೆ. ಆದರೆ ಫಸಲಿಗೆ ಬಂದ ಹಣ್ಣುಗಳು ಸಂಪೂರ್ಣವಾಗಿ ರೋಗಕ್ಕೆ ತುತ್ತಾಗಿ ಆಗಿ ಹೋಗುತ್ತಿವೆ. ಇದರಿಂದ ಅಂಗಡಿಯಿಂದ ತಂದ ಬೀಜದ ಫಾಲ್ಟ್ ಅಥವಾ ಹೊಸ ತಳಿಯ ರೋಗ ಬಂದಿದೆಯಾ ಎಂಬುದು ತಿಳಿಯುತ್ತಿಲ್ಲ. ಬೆಳೆಯು ಸಂಪೂರ್ಣವಾಗಿ ನಷ್ಟವಾಗಿದ್ದು, ಇದರಿಂದ ಬೆಳೆಯನ್ನು ನಾಶಪಡಿಸಲು ಮುಂದಾಗಿದ್ದೇನೆ ಎಂದು ರೈತ ಕಿರಣ್ ಗೌಡ ಹೇಳುತ್ತಾರೆ.
ಇದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೈತರ ಜಮೀನಿಗೆ ಬಂದು ಸಂಶೋಧನೆ ನಡೆಸಿ ರೈತರ ಕೈ ಸೇರಬೇಕಿದ್ದ ಬೆಳೆಗೆ ಏನು ತೊಂದರೆ ಆಗಿದೆ ಎಂಬುದನ್ನು ತಿಳಿಸಿ.ಇಲಾಖೆ ವತಿಯಿಂದ ಪರಿಹಾರ ಕೊಡಬೇಕು ಎಂದು ಯುವ ರೈತ ಕಿರಣ್ ಗೌಡ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು