6:33 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿ: ತೈಲ ಟ್ಯಾಂಕರ್ ಸ್ಫೋಟ; ರಸ್ತೆಗೆ ಚೆಲ್ಲಿದ ಆಯಿಲ್; ಸಂಚಾರ ಅಸ್ತವ್ಯಸ್ತ

22/12/2023, 18:39

ಬಂಟ್ವಾಳ(reporterkarnataka.com): ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಲಾರಿಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಘಟನೆಯಿಂದ ಲಾರಿಗಳೆರಡರ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ತೈಲ ರಸ್ತೆಯಲ್ಲಿ ಪೂರ್ತಿಯಾಗಿ ಚೆಲ್ಲಿದ ಘಟನೆ ನಡೆದಿದೆ. ಇದರಿಂದ ಹೆದ್ದಾರಿಯಲ್ಲಿ ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು.
ಮಂಗಳೂರಿನಿಂದ ಕಲ್ಲಿದ್ದಲನ್ನು ಹೇರಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ಟ್ರಾನ್ಸ್ ಪೋರ್ಟ್ ಸಂಸ್ಥೆಯ ಲಾರಿ ನರಹರಿ ಪರ್ವತದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆಯಿತು. ಡಿಕ್ಕಿಯಾದ ರಭಸಕ್ಕೆ ಓರ್ವ ಚಾಲಕ ಗಂಭೀರ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಲಾರಿಗಳೆರಡರ ತೈಲ ತುಂಬಿದ ಟ್ಯಾಂಕ್ ಸ್ಫೋಟಗೊಂಡು ತೈಲ ಪೂರ್ತಿ ರಸ್ತೆಯಲ್ಲಿ ಚೆಲ್ಲಿದ್ದು,ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮ ಒಂದು ಬದಿಯಿಂದ ಮೆಲ್ಕಾರ್ ವರೆಗೂ ಇನ್ನೊಂದು ಬದಿಯಿಂದ ಕಲ್ಲಡ್ಕವರೆಗೂ ವಾಹನಗಳು ಮುಂದೆ ಚಲಿಸಲಾಗದೆ ಸಾಲಿನಲ್ಲಿ ನಿಂತ ದೃಶ್ಯ ಕಂಡು ಬಂತು.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬೇಟಿ ನೀಡಿದ ಟ್ರಾಫಿಕ್ ಎಸ್.ಐ.ಸುತೇಶ್ ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಕರೆಸಿ ನೀರು ಹಾಯಿಸುವ ಮೂಲಕ ತೈಲವನ್ನು ಶುಚಿಗೊಳಿಸುವ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು