2:54 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ

22/12/2023, 21:43

ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು.

ಸ್ನಾತಕೋತ್ತರ ಪದವಿ ಪಡೆಯ ಬೇಕಾದರೆ ಕೇವಲ ಪ್ರವೇಶ ಗಿಟ್ಟಿಸಿದರೆ ಸಾಲದು ಪ್ರತ್ಯುತ್ಪನ್ನ ಮತಿ ಸಹಿತವಾದ ಸಾಧನೆ ಅಗತ್ಯ. ಗ್ರಂಥೋಕ್ತ ವಿಚಾರಗಳನ್ನು ದಾಖಲೀಕರಣ ಮಾಡಲು ಸರಿಯಾದ ಅನುಸಂಧಾನದ ಅಗತ್ಯವಿದೆ. ಆದ ಕಾರಣ ಯೋಗ್ಯ ಉಪದೇಶಕನ ಜೊತೆಗೆ ಪೂರ್ಣ ಪ್ರಮಾಣದ ಕ್ರಮ ಬದ್ಧವಾದ ಅನುಸಂಧಾನ ಪ್ರಕ್ರಿಯೆ ಅಗತ್ಯ. ತೌಲನಾತ್ಮಕ ಅಧ್ಯಯನ, ವೈಜ್ಞಾನಿಕ ಸಲಕರಣೆಗಳಾದ ಸಿ‌.ಟಿ.ಸ್ಕಾನ್,ಕ್ಷ ಕಿರಣ, ಲ್ಯಾಬೊರೇಟರಿ ಇತ್ಯಾದಿಗಳನ್ನು ಬಳಸಿ ಸತ್ಯಾನ್ವೇಷಣೆ ಮಾಡ ಬೇಕು.
ಎಷ್ಟೋ ಉತ್ತಮ ಅಂಶಗಳು ಅಧ್ಯಯನದ ಕೊರತೆಯಿಂದ ಮಾಸಿ ಹೋಗಿವೆ. ಅಂಥವುಗಳ ಪುನರುಜ್ಜೀವನಕ್ಕೆ ಈ ರೀತಿಯ ಅಧ್ಯಯನ ಅಗತ್ಯ ಎನ್ನುತ್ತಾ ಹಲವಾರು ಪೂರಕ ಉದಾಹರಣೆಗಳನ್ನೂ ಸ್ವರಚಿತ ಮುಕ್ತಕ ಮಾಲೆಯನ್ನೂ ವಾಚಿಸಿದರು.


ಕಾಲೇಜು ಪ್ರಾಚಾರ್ಯ ಡಾ ಸಜೀತ್ ಎಂ. ಹಾಗೂ ಸ್ನಾತಕೋತ್ತರ ಡೀನ್ ಡಾ ರವಿರಾಜ ಹೆಗ್ಡೆ ಸಹಿತ ಎಪ್ಪತ್ತು ಮಂದಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.
ಪ್ರಾಚಾರ್ಯರು ಪುಸ್ತಕ ಹಾರ ಹಾಗೂ ಶಾಲು ಹೊದೆಸಿ ಸನ್ಮಾನ ಮಾಡುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು