1:18 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ

22/12/2023, 21:43

ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು.

ಸ್ನಾತಕೋತ್ತರ ಪದವಿ ಪಡೆಯ ಬೇಕಾದರೆ ಕೇವಲ ಪ್ರವೇಶ ಗಿಟ್ಟಿಸಿದರೆ ಸಾಲದು ಪ್ರತ್ಯುತ್ಪನ್ನ ಮತಿ ಸಹಿತವಾದ ಸಾಧನೆ ಅಗತ್ಯ. ಗ್ರಂಥೋಕ್ತ ವಿಚಾರಗಳನ್ನು ದಾಖಲೀಕರಣ ಮಾಡಲು ಸರಿಯಾದ ಅನುಸಂಧಾನದ ಅಗತ್ಯವಿದೆ. ಆದ ಕಾರಣ ಯೋಗ್ಯ ಉಪದೇಶಕನ ಜೊತೆಗೆ ಪೂರ್ಣ ಪ್ರಮಾಣದ ಕ್ರಮ ಬದ್ಧವಾದ ಅನುಸಂಧಾನ ಪ್ರಕ್ರಿಯೆ ಅಗತ್ಯ. ತೌಲನಾತ್ಮಕ ಅಧ್ಯಯನ, ವೈಜ್ಞಾನಿಕ ಸಲಕರಣೆಗಳಾದ ಸಿ‌.ಟಿ.ಸ್ಕಾನ್,ಕ್ಷ ಕಿರಣ, ಲ್ಯಾಬೊರೇಟರಿ ಇತ್ಯಾದಿಗಳನ್ನು ಬಳಸಿ ಸತ್ಯಾನ್ವೇಷಣೆ ಮಾಡ ಬೇಕು.
ಎಷ್ಟೋ ಉತ್ತಮ ಅಂಶಗಳು ಅಧ್ಯಯನದ ಕೊರತೆಯಿಂದ ಮಾಸಿ ಹೋಗಿವೆ. ಅಂಥವುಗಳ ಪುನರುಜ್ಜೀವನಕ್ಕೆ ಈ ರೀತಿಯ ಅಧ್ಯಯನ ಅಗತ್ಯ ಎನ್ನುತ್ತಾ ಹಲವಾರು ಪೂರಕ ಉದಾಹರಣೆಗಳನ್ನೂ ಸ್ವರಚಿತ ಮುಕ್ತಕ ಮಾಲೆಯನ್ನೂ ವಾಚಿಸಿದರು.


ಕಾಲೇಜು ಪ್ರಾಚಾರ್ಯ ಡಾ ಸಜೀತ್ ಎಂ. ಹಾಗೂ ಸ್ನಾತಕೋತ್ತರ ಡೀನ್ ಡಾ ರವಿರಾಜ ಹೆಗ್ಡೆ ಸಹಿತ ಎಪ್ಪತ್ತು ಮಂದಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.
ಪ್ರಾಚಾರ್ಯರು ಪುಸ್ತಕ ಹಾರ ಹಾಗೂ ಶಾಲು ಹೊದೆಸಿ ಸನ್ಮಾನ ಮಾಡುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು