1:02 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ

22/12/2023, 21:43

ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು.

ಸ್ನಾತಕೋತ್ತರ ಪದವಿ ಪಡೆಯ ಬೇಕಾದರೆ ಕೇವಲ ಪ್ರವೇಶ ಗಿಟ್ಟಿಸಿದರೆ ಸಾಲದು ಪ್ರತ್ಯುತ್ಪನ್ನ ಮತಿ ಸಹಿತವಾದ ಸಾಧನೆ ಅಗತ್ಯ. ಗ್ರಂಥೋಕ್ತ ವಿಚಾರಗಳನ್ನು ದಾಖಲೀಕರಣ ಮಾಡಲು ಸರಿಯಾದ ಅನುಸಂಧಾನದ ಅಗತ್ಯವಿದೆ. ಆದ ಕಾರಣ ಯೋಗ್ಯ ಉಪದೇಶಕನ ಜೊತೆಗೆ ಪೂರ್ಣ ಪ್ರಮಾಣದ ಕ್ರಮ ಬದ್ಧವಾದ ಅನುಸಂಧಾನ ಪ್ರಕ್ರಿಯೆ ಅಗತ್ಯ. ತೌಲನಾತ್ಮಕ ಅಧ್ಯಯನ, ವೈಜ್ಞಾನಿಕ ಸಲಕರಣೆಗಳಾದ ಸಿ‌.ಟಿ.ಸ್ಕಾನ್,ಕ್ಷ ಕಿರಣ, ಲ್ಯಾಬೊರೇಟರಿ ಇತ್ಯಾದಿಗಳನ್ನು ಬಳಸಿ ಸತ್ಯಾನ್ವೇಷಣೆ ಮಾಡ ಬೇಕು.
ಎಷ್ಟೋ ಉತ್ತಮ ಅಂಶಗಳು ಅಧ್ಯಯನದ ಕೊರತೆಯಿಂದ ಮಾಸಿ ಹೋಗಿವೆ. ಅಂಥವುಗಳ ಪುನರುಜ್ಜೀವನಕ್ಕೆ ಈ ರೀತಿಯ ಅಧ್ಯಯನ ಅಗತ್ಯ ಎನ್ನುತ್ತಾ ಹಲವಾರು ಪೂರಕ ಉದಾಹರಣೆಗಳನ್ನೂ ಸ್ವರಚಿತ ಮುಕ್ತಕ ಮಾಲೆಯನ್ನೂ ವಾಚಿಸಿದರು.


ಕಾಲೇಜು ಪ್ರಾಚಾರ್ಯ ಡಾ ಸಜೀತ್ ಎಂ. ಹಾಗೂ ಸ್ನಾತಕೋತ್ತರ ಡೀನ್ ಡಾ ರವಿರಾಜ ಹೆಗ್ಡೆ ಸಹಿತ ಎಪ್ಪತ್ತು ಮಂದಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.
ಪ್ರಾಚಾರ್ಯರು ಪುಸ್ತಕ ಹಾರ ಹಾಗೂ ಶಾಲು ಹೊದೆಸಿ ಸನ್ಮಾನ ಮಾಡುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು