7:45 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕೆನರಾ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರು ಸುಧೀಂದ್ರರ ಮೂರ್ತಿ ಅನಾವರಣ: ಕ್ಯಾಂಪಸ್ಸಿಗೆ ʼಸುಧೀಂದ್ರ ನಗರʼ ನಾಮಕರಣ

22/12/2023, 21:53

ಮಂಗಳೂರು(reporterkarnataka.com): ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗಮನಾರ್ಹ ಎಂದು ಶ್ರೀ ಕಾಶೀಮಠಾಧೀಶ ಶ್ರೀಮದ್‌ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ಹೇಳಿದರು. ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್‌ ಕಾಲೇಜಿಗೆ ಅನುಗ್ರಹ ಭೇಟಿ ನೀಡಿ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ವನಮಂಟಪದಲ್ಲಿ ಪರಮಗುರು ಶ್ರೀಮದ್‌ ಸುಧೀಂದ್ರ ತೀಥ ಸ್ವಾಮೀಜಿಯವರ ಮೂರ್ತಿಯನ್ನು ಅನಾವರಣಗೊಳಿಸಿದರು. ಕಾಲೇಜಿನ ಸಮಗ್ರ ಆವರಣಕ್ಕೆ ʼಸುಧೀಂದ್ರ ನಗರʼ ನಾಮಕರಣ ನೆರವೇರಿಸಿದರು. ಈ ಸವಿನೆನಪಿಗಾಗಿ ಶ್ರೀಗಂಧದ ಸಸಿಯೊಂದನ್ನು ಅವರು ನೆಟ್ಟರು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಗಳವರು ವಾತ್ಸಲ್ಯಭರಿತ ಭೋಧನೆ, ಸಂಸ್ಕಾರಯುತ ಶಿಕ್ಷಣ, ಪ್ರಾಯೋಗಿಕ ಜ್ಞಾನದ ಜತೆಗೆ ಸಂಶೋಧನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ಅಗತ್ಯವಿದೆ ಎಂದರು. ನಮ್ಮ ರಾಷ್ಟ್ರದ ಉತ್ಪನ್ನಗಳಿಗೆ ನಾವು ಮೊದಲ ಪ್ರಾಶಸ್ತ್ಯ ನೀಡಬೇಕು. ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೀತಿಯ ಮಹತ್ವವನ್ನು ಪರಿಣಾಮಕಾರಿಯಾಗಿ ತಿಳಿಸಿಕೊಡುವ ಅಗತ್ಯವಿದೆ ಎಂದವರು ನುಡಿದರು.
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ʼಡಿಜಿಟಲ್‌ ಪ್ಲಾಟ್‌ ಫಾರಂʼ ಹಾಗೂ ಕೆನರಾ ಇಂಜಿನಿಯರಿಂಗ್‌ ಕಾಲೇಜಿನ ನೂತನ ವೆಬ್‌ಸೈಟ್‌ ಲೋಕಾರ್ಪಣೆಯನ್ನು ಶ್ರೀಗಳವರು ಈ ಸಂದರ್ಭದಲ್ಲಿ ನೆರವರೇರಿಸಿದರು. ಕಾಲೇಜಿನ ವಿವಿಧ ವಿಭಾಗಗಳು, ಪ್ರಯೋಗಾಲಯಗಳಿಗೂ ಶ್ರೀಗಳವರು ಭೇಟಿ ನೀಡಿದರು.
ಕಾಲೇಜಿನ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್‌ ಅಸೋಸಿಯೇಶನ್‌ ಪದಾಧಿಕಾರಿಗಳು, ಕಾಲೇಜಿನ ವತಿಯಿಂದ ಶ್ರೀಗಳವರಿಗೆ ಗೌರವಾದರಗಳಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಆಡಳಿತ ಮಂಡಳಿ ಅಧ್ಯಕ್ಷ ಡಿ.ವಾಸುದೇವ ಕಾಮತ್‌, ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್‌ ಗುರು ಪಾದಪೂಜೆ ನೆರವೇರಿಸಿದರು. ಅಡಳಿತ ಮಂಡಳಿಯ ಸಹ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್‌ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಶ್ರೀ ಹರಿ ಗುರು ದಯೆಯಿಂದ ಕೆನರಾ ಸಂಸ್ಥೆಗಳು ಬೆಳೆದಿವೆ. ಪ್ರಸ್ತುತ ಹೊಸದಾಗಿ ನರ್ಸಿಂಗ್ ಶಿಕ್ಷಣದ ಜತೆಗೆ ಯುಪಿಎಸ್ಸಿ ಪರೀಕ್ಷಾರ್ಥಿಗಳಿಗೆ ರೆಸಿಡೆನ್ಸಿಶಿಯಲ್ ಕೋರ್ಸ್ ಆರಂಭಿಸುವ ತಯಾರಿ ನಡೆದಿದ್ದು ಮುಂದಿನ ಹಂತದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವ ಕನಸು ನನಸಾಗಬೇಕಿದೆ ಎಂದರು.


ಆಡಳಿತ ಮಂಡಳಿಯ ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಜತೆ ಕಾರ್ಯದರ್ಶಿಗಳಾದ ಕೆ. ಸುರೇಶ್‌ ಕಾಮತ್‌, ಟಿ.ಗೋಪಾಲಕೃಷ್ಣ ಶೆಣೈ, ಸಹಿತ ಸದಸ್ಯರಾದ ಬಸ್ತಿ ಪುರುಷೋತ್ತಮ ಶೆಣೈ, ಕೆ. ಶಿವಾನಂದ ಶೆಣೈ, ಎಂ. ನರೇಶ್‌ ಶೆಣೈ, ಯೋಗೀಶ ಆರ್.ಕಾಮತ್‌, ಅಶ್ವಿನಿ ಗಣೇಶ್ ಕಾಮತ್ ,ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್‌ ಹೆಚ್. ಆರ್. , ಡೀನ್ಸ್‌ , ವಿಭಾಗ ಮುಖ್ಯಸ್ಥರುಗಳು,ಕಾಲೇಜಿನ ಬೋಧಕ, ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು