10:59 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಶಾಲಾ – ಕಾಲೇಜು ಕ್ಯಾಂಪಸ್ ಗಳಲ್ಲಿ ಯೂನಿಫಾರ್ಮ್ ವಸ್ತ್ರ ಸಂಹಿತೆಗೆ ಸರಕಾರವೇ ಅಡ್ಡಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

23/12/2023, 15:16

ಮಂಗಳೂರು(reporterkarnataka.com): ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ.
ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ ನೀಡುವುದಾದರೆ ಕೇಸರಿ ಶಾಲು ಧರಿಸಿ ಹಿಂದೂ ವಿದ್ಯಾರ್ಥಿಗಳು ಹೋಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ತಿರುಗೇಟು ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಕ್ಯಾಂಪಸ್ ಗಳಲ್ಲಿ ವಸ್ತ್ರ ಸಂಹಿತೆ ಕುರಿತಂತೆ ಸುಧೀರ್ಘ ಹೋರಾಟವೊಂದು ವಿವಿಧ ವಿದ್ಯಾರ್ಥಿ ಸಂಘಟನೆಗಳ ನಡುವೆ ರೂಪುಗೊಳ್ಳಬಹುದು ಎಂದಿರುವ ಶಾಸಕರು, ಸರಕಾರ ಕೂಡಲೇ ಎಚ್ಚೆತ್ತುಕೊಂಡು ತನ್ನ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಹಿಜಾಬ್ ಧರಿಸಲು ಕ್ಯಾಂಪಸ್ ಹೊರಗಡೆ , ಕಾಲೇಜಿನ ಒಳಗೂ ಅನುಮತಿ ನೀಡುವುದಾದರೆ, ಕೇಸರಿ ಶಾಲು ಧರಿಸಲು
ಹಿಂದೂಪರ ವಿದ್ಯಾರ್ಥಿಗಳಿಗೂ ಆಯ್ಕೆ ಸ್ವಾತಂತ್ರ್ಯ ವಿದೆ.
ಜಾತಿ ಗೊಂದರಂತೆ ಬಟ್ಟೆ ಧರಿಸಲು ಕ್ಯಾಂಪಸ್ ನಲ್ಲಿ ಅನುಮತಿ ನೀಡುವ ಮೂಲಕ ಸರಕಾರ ಶಾಲಾ-ಕಾಲೇಜಿನ ಯೂನಿಫಾರ್ಮ್ ವ್ಯವಸ್ಥೆಗೆ ಬೆಲೆ ಇಲ್ಲದಂತೆ ಮಾಡಿದೆ.
ಶಾಲಾ-ಕಾಲೇಜು ಕೊಠಡಿಯ ಒಳಗೆ ಎಲ್ಲರೂ ಸಮಾನರು ಎಂಬ ಭಾವನೆಗೆ ಸರಕಾರವೇ ಹಿಜಾಬ್ ಧರಿಸಲು ಅನುಮತಿ ನೀಡುವ ಮೂಲಕ ದಕ್ಕೆ ತಂದಂತಾಗಿದೆ. ಬಿಜೆಪಿ ಇದರ ವಿರುದ್ದ ಎಲ್ಲಾ ಹೋರಾಟ ಹಾದಿಯನ್ನು ಮುಕ್ತವಾಗಿ ಇರಿಸಿದೆ. ಸೂಕ್ತ ಸಮಾಲೋಚನೆಯ ಬಳಿಕ ಹೋರಾಟದ ಅಭಿಯಾನ ಆರಂಭವಾಗಲಿದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು