11:00 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ: ಪ್ರಗತಿಪರ ರೈತರಿಗೆ ಸನ್ಮಾನ

23/12/2023, 20:17

ಮಂಗಳೂರು (reporterkarnataka.com):ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇವರ ವತಿಯಿಂದ ರಾಷ್ಟ್ರೀಯ ಕೃಷಿಕರ ದಿನಾಚರಣೆಯನ್ನು ನಗರದಲ್ಲಿ ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಡಾ. ಶಿವಕುಮಾರ್ ಆರ್., (ಸಹಾಯಕ ಪ್ರಾದ್ಯಪಕರು, ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು) ವಹಿಸಿದ್ದು ತಮ್ಮ ಭಾಷಣದಲ್ಲಿ ಕೃಷಿಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ನಾವು ರೈತರ ದಿನಾಚರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ ಪ್ರತಿ ದಿನವನ್ನು ರೈತರ ದಿನವನ್ನಾಗಿ ಆಚರಿಸಬೇಕು ಎಂದು ತಿಳಿಸಿದರು.


ದಕ್ಷಿಣ ಕನ್ನಡ ಜಿಲ್ಲೆಯ ಮೂರು ಜನ ಪ್ರಗತಿಪರ ರೈತರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಯಿತು. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಉಳ್ಳಾಲ ತಾಲ್ಲೂಕಿನ ಹರೇಕಳ ಗ್ರಾಮದ ಮೈಮೂನ, ಸಿಹಿನೀರಿನಲ್ಲಿ ಮುತ್ತಿನ ಕೃಷಿ ಕೈಗೊಂಡಿರುವ ಸುಳ್ಯ ತಾಲ್ಲೂಕು ಐವರ್ ನಾಡು ಗ್ರಾಮದ ಸಿ. ಕೆ. ನವೀನ್ ಚಂದ್ರ ಹಾಗೂ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಗ್ರಾಮದ
ವಿಲ್ಮಾ ಪ್ರಿಯಾ ಆಲ್ಬಕರ್ಕ್ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರವನ್ನು ಡಾ. ಶಿವಕುಮಾರ್ ಆರ್, ಸಂಯೋಜಿಸಿದ್ದು ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ಸಿಬ್ಬಂದಿಯವರು ಮತ್ತು 35 ಜನ ರೈತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು