1:54 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ

24/12/2023, 21:33

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು.
ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಚುನಾವಣಾ ಫಾರಂ ಪ್ರೊಸೆಸಿಂಗ್ ಮತ್ತು ಫ್ರೂಟ್ಸ್ ಎಫ್‍ಐಡಿ ಪ್ರಗತಿ ಪರಿಶೀಲನೆ ನಡೆಸಿದರು.
ರೈತರಿಗೆ ಸರ್ಕಾರದ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಎಫ್‍ಐಡಿ ನೋಂದಣಿ ಕಾರ್ಯ ಚುರುಕುಗೊಳಿಸಬೇಕು. ಕಂದಾಯ ಇಲಾಖೆ ಸಿಬ್ಬಂದಿ, ಕೃಷಿ ಮತ್ತಿತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಫ್ರೂಟ್ಸ್ ಎಫ್‍ಐಡಿ ನೋಂದಣಿ ಗುರಿ ತಲುಪಬೇಕು. ಅದಕ್ಕೆ ಪೂರಕವಾಗಿ ಈ ಯೋಜನೆಯಿಂದ ಆಗುವ ಪ್ರಯೋಜನ ಕುರಿತು ರೈತರಿಗೆ ತಿಳಿಸಬೇಕು ಎಂದು ತಾಕೀತು ಮಾಡಿದರು.


ತಾಲ್ಲೂಕು ಕಚೇರಿ ಆವರಣಕ್ಕೆ ಸಿಮೆಂಟ್ ಹಾಸು ನಿರ್ಮಿಸುವ ಮತ್ತು ಕಚೇರಿ ಮುಂದೆ ರಸ್ತೆ ನಿರ್ಮಿಸುವ ಕಾಮಗಾರಿ ವೀಕ್ಷಿಸಿದರು ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ತಾಲ್ಲೂಕಿನ ರೋಣೂರು ಹೋಬಳಿ ವ್ಯಾಪ್ತಿಯ ಕೊಟ್ರಗುಳಿ ಮತ್ತು ದೇವಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಫಾರಂ ನಂಬರ್ 6,7,8 ಅರ್ಜಿಗಳು ಮತ್ತು ಎಫ್‍ಐಡಿ ನೋಂದಣಿ ಕುರಿತು ಪರಿಶೀಲಿಸಿದರು.
ತಹಶೀಲ್ದಾರ್ ಜಿ.ಎನ್. ಸುಧೀಂದ್ರ ,
ಪುರಸಭೆಯ ಮುಖ್ಯಅಧಿಕಾರಿ ವೈ ಎನ್ ಸತ್ಯನಾರಾಯಣ , ತಾಲ್ಲೂಕು ಕಚೇರಿ ಮತ್ತು ಪುರಸಭೆಯ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು