12:37 AM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ

25/12/2023, 22:03

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು.
ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್ಯುತ್ ದೀಪಗಳು ಮತ್ತು ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು, ಅಲಂಕರಿಸಿ ದೇವರಿಗೆ, ಹಾಲು-ತುಪ್ಪದ ಅಭಿಷೇಕ, ವಿವಿಧ ಬಗೆಯ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಭಕ್ತರು ಹನುಮಾನ ದರ್ಶನ ಪಡೆಯಲು ಹೂವಿನ ಹಾರ, ಬಾಳೆಹಣ್ಣು, ತೆಂಗಿನಕಾಯಿ, ಕರ್ಪೂರ, ಪೂಜಾ ಸಾಮಗ್ರಿಗಳೊಂದಿಗೆ ಗ್ರಾಮದ ಸಮಸ್ತ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನವನ್ನು ಪಡೆದಿದ್ದಾರೆ, ಎಂದು ಪೂಜಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿಯನ್ನು ತಾಲೂಕಿನಲ್ಲಿ ಬರಗಾಲವಿದ್ದರೂ ಸಹ ಗ್ರಾಮದ ಎಲ್ಲಾ ಜಾತಿ ಜನಾಂಗದ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಿದ್ದೇವೆ. ಅನ್ನ ಸಂತರ್ಪಣೆ ಮಾಡಲು ಒಂದು ಕ್ವಿಂಟಲ್ ಪುಳಿಯೋಗರೆ, ಅರ್ಧ ಕ್ವಿಂಟಲ್ ಪಾಯಸ,ಪಲ್ಯ ಎಲ್ಲವನ್ನು ಭಕ್ತರಿಗೆ ಮಾಡಿಸಿದ್ದು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಹಾಗೂ ಗ್ರಾಮದಲ್ಲಿ 12 ವರ್ಷಗಳಿಂದ ಹನುಮ ಜಯಂತಿ ಆಚರಿಸುತ್ತಾ ಬಂದಿದ್ದೇವೆ. ದೇವಸ್ಥಾನ ಇನ್ನು ಅಭಿವೃದ್ಧಿ ಹೊಂದಬೇಕಿದೆ. ಇದರಿಂದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ ಅವರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ಅನುದಾನದಲ್ಲಿ ಪೂರ್ಣಗೊಳಿಸಿ ಕೊಡುತ್ತಾರೆ ಎಂಬ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿ ಜಯಶೀಲರನ್ನಾಗಿಸಿದ್ದೇವೆ. ಶಾಸಕರು ದೇವಸ್ಥಾನವನ್ನು ಪೂರ್ಣಗೊಳಿಸಿ ಕೊಡುವ ನಂಬಿಕೆ ಗ್ರಾಮಸ್ಥರಿಗೆ ಇದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪಿ.ಟಿ.ಎಸ್. ನಾಗರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು