6:51 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಂಭ್ರಮ- ಸಡಗರದಿಂದ ನಡೆದ ಹನುಮ ಜಯಂತಿ: ದೇವರಿಗೆ ಹಾಲು- ತುಪ್ಪದ ಅಭಿಷೇಕ

25/12/2023, 22:03

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಹನುಮ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮ ಸಡಗರದಿಂದ ಗ್ರಾಮಸ್ಥರೆಲ್ಲರೂ ಆಚರಿಸಿದರು.
ಹನುಮನ ದೇವಸ್ಥಾನವನ್ನು ಮಾವಿನ-ತೋರಣ ವಿದ್ಯುತ್ ದೀಪಗಳು ಮತ್ತು ವಿವಿಧ ಬಗೆಯ ಹೂಗಳಿಂದ ದೇವಸ್ಥಾನವನ್ನು, ಅಲಂಕರಿಸಿ ದೇವರಿಗೆ, ಹಾಲು-ತುಪ್ಪದ ಅಭಿಷೇಕ, ವಿವಿಧ ಬಗೆಯ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಭಕ್ತರು ಹನುಮಾನ ದರ್ಶನ ಪಡೆಯಲು ಹೂವಿನ ಹಾರ, ಬಾಳೆಹಣ್ಣು, ತೆಂಗಿನಕಾಯಿ, ಕರ್ಪೂರ, ಪೂಜಾ ಸಾಮಗ್ರಿಗಳೊಂದಿಗೆ ಗ್ರಾಮದ ಸಮಸ್ತ ಭಕ್ತರು ದೇವಸ್ಥಾನಕ್ಕೆ ಬಂದು ದರ್ಶನವನ್ನು ಪಡೆದಿದ್ದಾರೆ, ಎಂದು ಪೂಜಾರಿ ರಂಗಸ್ವಾಮಿ ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿಯನ್ನು ತಾಲೂಕಿನಲ್ಲಿ ಬರಗಾಲವಿದ್ದರೂ ಸಹ ಗ್ರಾಮದ ಎಲ್ಲಾ ಜಾತಿ ಜನಾಂಗದ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಿದ್ದೇವೆ. ಅನ್ನ ಸಂತರ್ಪಣೆ ಮಾಡಲು ಒಂದು ಕ್ವಿಂಟಲ್ ಪುಳಿಯೋಗರೆ, ಅರ್ಧ ಕ್ವಿಂಟಲ್ ಪಾಯಸ,ಪಲ್ಯ ಎಲ್ಲವನ್ನು ಭಕ್ತರಿಗೆ ಮಾಡಿಸಿದ್ದು 2 ಸಾವಿರಕ್ಕೂ ಅಧಿಕ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಹಾಗೂ ಗ್ರಾಮದಲ್ಲಿ 12 ವರ್ಷಗಳಿಂದ ಹನುಮ ಜಯಂತಿ ಆಚರಿಸುತ್ತಾ ಬಂದಿದ್ದೇವೆ. ದೇವಸ್ಥಾನ ಇನ್ನು ಅಭಿವೃದ್ಧಿ ಹೊಂದಬೇಕಿದೆ. ಇದರಿಂದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ ಅವರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ಅನುದಾನದಲ್ಲಿ ಪೂರ್ಣಗೊಳಿಸಿ ಕೊಡುತ್ತಾರೆ ಎಂಬ ಭರವಸೆ ನೀಡಿದ್ದರು. ಇದರಿಂದ ಗ್ರಾಮಸ್ಥರು ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿ ಜಯಶೀಲರನ್ನಾಗಿಸಿದ್ದೇವೆ. ಶಾಸಕರು ದೇವಸ್ಥಾನವನ್ನು ಪೂರ್ಣಗೊಳಿಸಿ ಕೊಡುವ ನಂಬಿಕೆ ಗ್ರಾಮಸ್ಥರಿಗೆ ಇದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಪಿ.ಟಿ.ಎಸ್. ನಾಗರಾಜ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು