7:29 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್

26/12/2023, 10:47

ರಮೇಶ್ ದೇವದುರ್ಗ ರಾಯಚೂರು

info.reporterkarnarnataka@gmail.ಕಂ

ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖವಾಗಿ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಸಭಾ ಪಾಲಕರಾದ ರೇ. ರವಿ ಪ್ರಸಾದ್ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಯೇಸುವಿನ ಪ್ರತಿಮೆ ಮುಂದೆ ಭಕ್ತರು ಮೊಂಬತ್ತಿ ಹಿಡಿದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಉಗ್ರಾಣಿಕರಾದ ಯೇಶಪ್ಪ, ನಾಗಬಸಪ್ಪ, ದೇವಪುತ್ರಪ್ಪ, ಎವನಪ್ಪ, ಹನುಮಂತ, ಗಂಗಪ್ಪ, ಶಿಕ್ಷಕರಾದ ಪ್ರಕಾಶ ಹೊನ್ನಟಗಿ, ಶಾಂತಕುಮಾರ ಹೊನ್ನಟಗಿ, ಬಾಬು, ಮಾರೆಪ್ಪ, ಯಲ್ಲಪ್ಪ, ಭೀಮಣ್ಣ, ಬೂದೆಪ್ಪ, ಮಹೇಶ, ದೇವರಾಜ, ಅಬ್ರಾಂ, ಅನಿತಾ, ಮರಿಯಾಳಮ್ಮ, ಆಶಾ ಕಾರ್ಯಕರ್ತೆ ಲಲಿತಮ್ಮ, ಗಂಗಮ್ಮ, ಗೀತಾ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅನೇಕು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು