8:57 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್

26/12/2023, 10:47

ರಮೇಶ್ ದೇವದುರ್ಗ ರಾಯಚೂರು

info.reporterkarnarnataka@gmail.ಕಂ

ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖವಾಗಿ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಸಭಾ ಪಾಲಕರಾದ ರೇ. ರವಿ ಪ್ರಸಾದ್ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಯೇಸುವಿನ ಪ್ರತಿಮೆ ಮುಂದೆ ಭಕ್ತರು ಮೊಂಬತ್ತಿ ಹಿಡಿದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಉಗ್ರಾಣಿಕರಾದ ಯೇಶಪ್ಪ, ನಾಗಬಸಪ್ಪ, ದೇವಪುತ್ರಪ್ಪ, ಎವನಪ್ಪ, ಹನುಮಂತ, ಗಂಗಪ್ಪ, ಶಿಕ್ಷಕರಾದ ಪ್ರಕಾಶ ಹೊನ್ನಟಗಿ, ಶಾಂತಕುಮಾರ ಹೊನ್ನಟಗಿ, ಬಾಬು, ಮಾರೆಪ್ಪ, ಯಲ್ಲಪ್ಪ, ಭೀಮಣ್ಣ, ಬೂದೆಪ್ಪ, ಮಹೇಶ, ದೇವರಾಜ, ಅಬ್ರಾಂ, ಅನಿತಾ, ಮರಿಯಾಳಮ್ಮ, ಆಶಾ ಕಾರ್ಯಕರ್ತೆ ಲಲಿತಮ್ಮ, ಗಂಗಮ್ಮ, ಗೀತಾ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅನೇಕು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು