2:17 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಸ್ಕಿ: ಹೃದಯಾಘಾತಕ್ಕೆ ಶಿಕ್ಷಕ ಬಲಿ; ಮೊದಲ ತರಗತಿ ಮುಗಿಸಿದ್ದ ಅಧ್ಯಾಪಕ; ಮುಗಿಲು ಮುಟ್ಟಿದ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ

26/12/2023, 20:55

ವೀರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಭಾರ ಮುಖ್ಯ ಶಿಕ್ಷಕ ಶಾಲೆಯಲ್ಲೇ ಹಠಾತ್ ಹೃದಯಘಾತದಿಂದ ಮೃತಪಟ್ಟ ಘಟನೆ ಗದ್ರಟಗಿ ಗ್ರಾಮದಲ್ಲಿ ಜರುಗಿದ್ದು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಶಿಕ್ಷಕ ಸುರೇಶ(57) ಹೃದಯಘಾತದಿಂದ ಮೃತಪಟ್ಟಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಮೊದಲ ತರಗತಿ ಮುಗಿಸಿಕೊಂಡು ಬಂದು ಕಚೇರಿಯಲ್ಲಿ ಕುಳಿತ್ತಿದ್ದ ಮುಖ್ಯೋಪಾಧ್ಯಾಯ ಸುರೇಶ ಅವರು, ಶಾಲೆಗೆ ಸಂಬಂಧಿಸಿದ ಮಾಹಿತಿ ಪುಸ್ತಕದಲ್ಲಿ ಬರೆಯುತ್ತಿದ್ದರು, ಈ ವೇಳೆ ಹಠಾತ್ ಹೃದಯಾಘಾತವಾಗಿದೆ. ಕುಳಿತ ಛೇರಿನ ಮೇಲೆಯ ಮೃತಪಟ್ಟಿದ್ದಾರೆ.


ಹಠಾತ್ ನಿಧನದಿಂದ ಶಾಲೆಯ ಶಿಕ್ಷಕರು, ಇಡೀ ಶಾಲೆ ಮಕ್ಕಳ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಶಿಕ್ಷಕನಿಗೆ ಪತ್ನಿ, ಮೂವರು ಪುತ್ರರು ಇದ್ದು,‌ಮೂಲತಃ ರಾಣೆಬೆನ್ನೂರಿನವರಾಗಿದ್ದಾರೆ. ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು