9:19 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಸ್ಕಿ: ಹೃದಯಾಘಾತಕ್ಕೆ ಶಿಕ್ಷಕ ಬಲಿ; ಮೊದಲ ತರಗತಿ ಮುಗಿಸಿದ್ದ ಅಧ್ಯಾಪಕ; ಮುಗಿಲು ಮುಟ್ಟಿದ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ

26/12/2023, 20:55

ವೀರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಭಾರ ಮುಖ್ಯ ಶಿಕ್ಷಕ ಶಾಲೆಯಲ್ಲೇ ಹಠಾತ್ ಹೃದಯಘಾತದಿಂದ ಮೃತಪಟ್ಟ ಘಟನೆ ಗದ್ರಟಗಿ ಗ್ರಾಮದಲ್ಲಿ ಜರುಗಿದ್ದು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಶಿಕ್ಷಕ ಸುರೇಶ(57) ಹೃದಯಘಾತದಿಂದ ಮೃತಪಟ್ಟಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಮೊದಲ ತರಗತಿ ಮುಗಿಸಿಕೊಂಡು ಬಂದು ಕಚೇರಿಯಲ್ಲಿ ಕುಳಿತ್ತಿದ್ದ ಮುಖ್ಯೋಪಾಧ್ಯಾಯ ಸುರೇಶ ಅವರು, ಶಾಲೆಗೆ ಸಂಬಂಧಿಸಿದ ಮಾಹಿತಿ ಪುಸ್ತಕದಲ್ಲಿ ಬರೆಯುತ್ತಿದ್ದರು, ಈ ವೇಳೆ ಹಠಾತ್ ಹೃದಯಾಘಾತವಾಗಿದೆ. ಕುಳಿತ ಛೇರಿನ ಮೇಲೆಯ ಮೃತಪಟ್ಟಿದ್ದಾರೆ.


ಹಠಾತ್ ನಿಧನದಿಂದ ಶಾಲೆಯ ಶಿಕ್ಷಕರು, ಇಡೀ ಶಾಲೆ ಮಕ್ಕಳ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಶಿಕ್ಷಕನಿಗೆ ಪತ್ನಿ, ಮೂವರು ಪುತ್ರರು ಇದ್ದು,‌ಮೂಲತಃ ರಾಣೆಬೆನ್ನೂರಿನವರಾಗಿದ್ದಾರೆ. ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು