1:22 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹೊಸ ವರ್ಷಾಚಣೆ: ಕಡಲನಗರಿಯಲ್ಲಿ ಬಿಗಿ ಬಂದೋಬಸ್ತ್; 17 ಹೊಯ್ಸಳ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆ

30/12/2023, 23:55

ಮಂಗಳೂರು(reporterkarnataka.com): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಈ ವಿಷಯ ತಿಳಿಸಿದ್ದಾರೆ.
ನಗರದಲ್ಲಿ ಚರ್ಚ್, ಹೊಟೇಲ್, ರೆಸ್ಟೋರೆಂಟ್, ಖಾಸಗಿ ಸಭಾಂಗಣ ಸೇರಿದಂತೆ ಒಳಾಂಗಣಗಳಲ್ಲಿ ಕಾರ್ಯಕ್ರಮ ನಡೆಸಲು ಕೋರಿ 36 ಅರ್ಜಿಗಳು ಬಂದಿವೆ. ಹಲವು ನಿಬಂಧನೆಗಳೊಂದಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದ್ದು, ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸುವವರು ಮಧ್ಯರಾತ್ರಿ 12.30ರವರೆಗೆ ಅವಕಾಶ ನೀಡಲಾಗುತ್ತಿದೆ ಎಂದರು.
ಬೀಚ್ ಅಥವಾ ಇತರೆಡೆ ಹೊರಾಂಗಣಗಳಲ್ಲಿ ಕಾರ್ಯಕ್ರಮ ನಡೆಸುವವರು 10ಕ್ಕೆ ಮುಕ್ತಾಯಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಪೂರ್ಣ ನಿಗಾ ವಹಿಸಲಿದ್ದು, 17 ಹೊಯ್ಸಳ ವಾಹನ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆಯಲ್ಲಿರಲಿವೆ. 106 ಪಾಯಿಂಟ್‌ಗಳಲ್ಲಿ ಎಸಿಪಿ ದರ್ಜೆಯಿಂದ ಹಿಡಿದು ಅಧಿಕಾರಿ, ಸಿಬ್ಬಂದಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಸಿವಿಲ್ ಹಾಗೂ ಟ್ರಾಫಿಕ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ವಹಿಸಲಿದ್ದಾರೆ. ಡ್ರಗ್ಸ್ ವಿರುದ್ಧವೂ ನಾಲ್ಕು ತಂಡಗಳು ಕಾರ್ಯಾಚರಿಸಲಿದ್ದು, ಸೇವನೆ ಮತ್ತು ಸಾಗಾಟ- ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ. ಬೀಚ್‌ಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಮುಂಜಾಗೃತಾ ಕ್ರಮಗಳ ಜತೆಗೆ ಲೈಟಿಂಗ್ ವ್ಯವಸ್ಥೆಗೂ ಕ್ರಮ ವಹಿಸಲಾಗಿದೆ. 112 ಸೇರಿದಂತೆ ಸ್ಥಳೀಯ ಅಧಿಕಾರಿಗಳು ನೇರವಾಗಿ ಸಂಪರ್ಕಕ್ಕೆ ಸಹಕಾರಿ ಆಗುವಂತೆ ಕ್ರಮ ವಹಿಸಲಾಗಿದೆ ಎಂದು ಅವರು ವಿವರ ನೀಡಿದರು.
ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು